July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ: ಉಜಿರೆಯ ಸಮೀಪದ ಕನ್ಯಾಡಿ-2 ಗ್ರಾಮದ ನಾರ್ಯ ಮೂರು ಮಾರ್ಗ ಎಂಬಲ್ಲಿ ಅ.25 ರಂದು ರಾತ್ರಿ ಚಿರತೆ ಕಂಡು ಬಂದಿರುವ ಕುರಿತು ತಿಳಿದು ಬಂದಿದೆ.

ರಾತ್ರಿ ಸಮಯ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಮೀಪದ ಪಾಣೇಲಿನ ವ್ಯಕ್ತಿಗೆ ಚಿರತೆ ಕಂಡು ಬಂದಿದೆ ಎಂದು ಹೇಳಲಾಗುತ್ತಿದ್ದು, ಚಿರತೆಯ ಚಿತ್ರ ಸೆರೆಹಿಡಿದಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಾರ್ಯ ಪರಿಸರದಲ್ಲಿ ಹಲವು ಮನೆಗಳು ಇದ್ದು ಇಲ್ಲಿನ ಮಂದಿ ಚಿರತೆ ಓಡಾಟದಿಂದ ಭಯ ಭೀತರಾಗಿದ್ದಾರೆ. ಈ ಭಾಗದಲ್ಲಿ ಧರ್ಮಸ್ಥಳ ಮೀಸಲು ಅರಣ್ಯ ಹಾಗೂ ಬೆಳಾಲು ವ್ಯಾಪ್ತಿಯ ದಡಂತಮಲೆ ಅರಣ್ಯ ಪ್ರದೇಶ ಇದ್ದು ಸಾವಿರ ಎಕರೆಗೂ ಹೆಚ್ಚಿನ ಅರಣ್ಯವಿದೆ. ಆಗಾಗ ಚಿರತೆ ಓಡಾಟ ಇರುವ ಸಾಧ್ಯತೆಯೂ ಇದೆ, ಬುಧವಾರ ರಾತ್ರಿಯ ವಿಚಾರ ಖಚಿತಗೊಂಡಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya
error: Content is protected !!