23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ: ಉಜಿರೆಯ ಸಮೀಪದ ಕನ್ಯಾಡಿ-2 ಗ್ರಾಮದ ನಾರ್ಯ ಮೂರು ಮಾರ್ಗ ಎಂಬಲ್ಲಿ ಅ.25 ರಂದು ರಾತ್ರಿ ಚಿರತೆ ಕಂಡು ಬಂದಿರುವ ಕುರಿತು ತಿಳಿದು ಬಂದಿದೆ.

ರಾತ್ರಿ ಸಮಯ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಮೀಪದ ಪಾಣೇಲಿನ ವ್ಯಕ್ತಿಗೆ ಚಿರತೆ ಕಂಡು ಬಂದಿದೆ ಎಂದು ಹೇಳಲಾಗುತ್ತಿದ್ದು, ಚಿರತೆಯ ಚಿತ್ರ ಸೆರೆಹಿಡಿದಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಾರ್ಯ ಪರಿಸರದಲ್ಲಿ ಹಲವು ಮನೆಗಳು ಇದ್ದು ಇಲ್ಲಿನ ಮಂದಿ ಚಿರತೆ ಓಡಾಟದಿಂದ ಭಯ ಭೀತರಾಗಿದ್ದಾರೆ. ಈ ಭಾಗದಲ್ಲಿ ಧರ್ಮಸ್ಥಳ ಮೀಸಲು ಅರಣ್ಯ ಹಾಗೂ ಬೆಳಾಲು ವ್ಯಾಪ್ತಿಯ ದಡಂತಮಲೆ ಅರಣ್ಯ ಪ್ರದೇಶ ಇದ್ದು ಸಾವಿರ ಎಕರೆಗೂ ಹೆಚ್ಚಿನ ಅರಣ್ಯವಿದೆ. ಆಗಾಗ ಚಿರತೆ ಓಡಾಟ ಇರುವ ಸಾಧ್ಯತೆಯೂ ಇದೆ, ಬುಧವಾರ ರಾತ್ರಿಯ ವಿಚಾರ ಖಚಿತಗೊಂಡಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!