23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

ಬೆಳ್ತಂಗಡಿ: ಶನಿವಾರ ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ಅ.28ಕ್ಕೆ ಚಂದ್ರಗ್ರಹಣ (Lunar Eclipse 2023) ನಡೆಯಲಿದ್ದು, ಅಕ್ಟೋಬರ್ 29ಕ್ಕೂ ಇದರ ಪ್ರಭಾವ ತಟ್ಟಲಿದೆ. ಜ್ಯೋತಿಷ್ಯದ ಪ್ರಕಾರ ಗ್ರಹಣ ಅಮಂಗಳ, ಸೂತಕದ ಛಾಯೆ ಎನ್ನುವ ನಂಬಿಕೆ ಇದೆ. ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದ್ದು ಭಾರತದಲ್ಲಿಯೂ ಗೋಚರಿಸಲಿದೆ.

ಗ್ರಹಣದ ಅವಧಿ (ವಿಜ್ಞಾನಿಗಳ ಪ್ರಕಾರ): ಅಕ್ಟೋಬರ್ -28ರ ರಾತ್ರಿ 11.30ಕ್ಕೆ ಸಂಭವಿಸಿ ಅಕ್ಟೋಬರ್ 29 ರ 2.30ರವರೆಗೆ ಇರಲಿದೆ. ಗ್ರಹಣದ ಅವಧಿ (ಜ್ಯೋತಿಷಿಗಳ ಪ್ರಕಾರ): ಮಧ್ಯರಾತ್ರಿ 1.04 ಕ್ಕೆ ಆರಂಭ. 2:22ಕ್ಕೆ ಅಂತ್ಯವಾಗಲಿದೆ ಎಂದಿದೆ.

ರಾಹುಗ್ರಸ್ಥ ಚಂದ್ರಗ್ರಹಣ ಎನ್ನಲಾಗಿದ್ದು, ಭಾರತದಲ್ಲೂ ಗೋಚರಿಸಲಿದೆ. ಶರದ್ ಪೂರ್ಣಿಮೆಯ ರಾತ್ರಿಯಲ್ಲಿ ಈ ಗ್ರಹಣ ಸಂಭವಿಸಲಿದ್ದು, ಗಜಕೇಸರಿ ಯೋಗದಲ್ಲಿ ಈ ಬಾರಿ ಚಂದ್ರಗ್ರಹಣ ಸಂಭವಿಸಲಿದ್ದು ಎಂದು ಜೋತಿಷ್ಯ ಶಾಸ್ತ್ರ ಹೇಳಿದೆ.

ಸಾಮಾನ್ಯವಾಗಿ ಗಜಕೇಸರಿ ಯೋಗದಲ್ಲಿ ಗ್ರಹಣ ಬಹಳ ಅಪರೂಪವಾಗಿದೆ. 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ ಇದಾಗಿದೆ. ವಿಜ್ಞಾನಿಗಳ ಪಾಲಿಗೆ ಇದು ವಿಸ್ಮಯವಾಗಲಿದೆ.

Related posts

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya
error: Content is protected !!