September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

ಬೆಳ್ತಂಗಡಿ: ಶನಿವಾರ ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ಅ.28ಕ್ಕೆ ಚಂದ್ರಗ್ರಹಣ (Lunar Eclipse 2023) ನಡೆಯಲಿದ್ದು, ಅಕ್ಟೋಬರ್ 29ಕ್ಕೂ ಇದರ ಪ್ರಭಾವ ತಟ್ಟಲಿದೆ. ಜ್ಯೋತಿಷ್ಯದ ಪ್ರಕಾರ ಗ್ರಹಣ ಅಮಂಗಳ, ಸೂತಕದ ಛಾಯೆ ಎನ್ನುವ ನಂಬಿಕೆ ಇದೆ. ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದ್ದು ಭಾರತದಲ್ಲಿಯೂ ಗೋಚರಿಸಲಿದೆ.

ಗ್ರಹಣದ ಅವಧಿ (ವಿಜ್ಞಾನಿಗಳ ಪ್ರಕಾರ): ಅಕ್ಟೋಬರ್ -28ರ ರಾತ್ರಿ 11.30ಕ್ಕೆ ಸಂಭವಿಸಿ ಅಕ್ಟೋಬರ್ 29 ರ 2.30ರವರೆಗೆ ಇರಲಿದೆ. ಗ್ರಹಣದ ಅವಧಿ (ಜ್ಯೋತಿಷಿಗಳ ಪ್ರಕಾರ): ಮಧ್ಯರಾತ್ರಿ 1.04 ಕ್ಕೆ ಆರಂಭ. 2:22ಕ್ಕೆ ಅಂತ್ಯವಾಗಲಿದೆ ಎಂದಿದೆ.

ರಾಹುಗ್ರಸ್ಥ ಚಂದ್ರಗ್ರಹಣ ಎನ್ನಲಾಗಿದ್ದು, ಭಾರತದಲ್ಲೂ ಗೋಚರಿಸಲಿದೆ. ಶರದ್ ಪೂರ್ಣಿಮೆಯ ರಾತ್ರಿಯಲ್ಲಿ ಈ ಗ್ರಹಣ ಸಂಭವಿಸಲಿದ್ದು, ಗಜಕೇಸರಿ ಯೋಗದಲ್ಲಿ ಈ ಬಾರಿ ಚಂದ್ರಗ್ರಹಣ ಸಂಭವಿಸಲಿದ್ದು ಎಂದು ಜೋತಿಷ್ಯ ಶಾಸ್ತ್ರ ಹೇಳಿದೆ.

ಸಾಮಾನ್ಯವಾಗಿ ಗಜಕೇಸರಿ ಯೋಗದಲ್ಲಿ ಗ್ರಹಣ ಬಹಳ ಅಪರೂಪವಾಗಿದೆ. 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ ಇದಾಗಿದೆ. ವಿಜ್ಞಾನಿಗಳ ಪಾಲಿಗೆ ಇದು ವಿಸ್ಮಯವಾಗಲಿದೆ.

Related posts

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya
error: Content is protected !!