22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ: ಉಜಿರೆಯ ಸಮೀಪದ ಕನ್ಯಾಡಿ-2 ಗ್ರಾಮದ ನಾರ್ಯ ಮೂರು ಮಾರ್ಗ ಎಂಬಲ್ಲಿ ಅ.25 ರಂದು ರಾತ್ರಿ ಚಿರತೆ ಕಂಡು ಬಂದಿರುವ ಕುರಿತು ತಿಳಿದು ಬಂದಿದೆ.

ರಾತ್ರಿ ಸಮಯ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಮೀಪದ ಪಾಣೇಲಿನ ವ್ಯಕ್ತಿಗೆ ಚಿರತೆ ಕಂಡು ಬಂದಿದೆ ಎಂದು ಹೇಳಲಾಗುತ್ತಿದ್ದು, ಚಿರತೆಯ ಚಿತ್ರ ಸೆರೆಹಿಡಿದಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಾರ್ಯ ಪರಿಸರದಲ್ಲಿ ಹಲವು ಮನೆಗಳು ಇದ್ದು ಇಲ್ಲಿನ ಮಂದಿ ಚಿರತೆ ಓಡಾಟದಿಂದ ಭಯ ಭೀತರಾಗಿದ್ದಾರೆ. ಈ ಭಾಗದಲ್ಲಿ ಧರ್ಮಸ್ಥಳ ಮೀಸಲು ಅರಣ್ಯ ಹಾಗೂ ಬೆಳಾಲು ವ್ಯಾಪ್ತಿಯ ದಡಂತಮಲೆ ಅರಣ್ಯ ಪ್ರದೇಶ ಇದ್ದು ಸಾವಿರ ಎಕರೆಗೂ ಹೆಚ್ಚಿನ ಅರಣ್ಯವಿದೆ. ಆಗಾಗ ಚಿರತೆ ಓಡಾಟ ಇರುವ ಸಾಧ್ಯತೆಯೂ ಇದೆ, ಬುಧವಾರ ರಾತ್ರಿಯ ವಿಚಾರ ಖಚಿತಗೊಂಡಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!