25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ: ಉಜಿರೆಯ ಸಮೀಪದ ಕನ್ಯಾಡಿ-2 ಗ್ರಾಮದ ನಾರ್ಯ ಮೂರು ಮಾರ್ಗ ಎಂಬಲ್ಲಿ ಅ.25 ರಂದು ರಾತ್ರಿ ಚಿರತೆ ಕಂಡು ಬಂದಿರುವ ಕುರಿತು ತಿಳಿದು ಬಂದಿದೆ.

ರಾತ್ರಿ ಸಮಯ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಮೀಪದ ಪಾಣೇಲಿನ ವ್ಯಕ್ತಿಗೆ ಚಿರತೆ ಕಂಡು ಬಂದಿದೆ ಎಂದು ಹೇಳಲಾಗುತ್ತಿದ್ದು, ಚಿರತೆಯ ಚಿತ್ರ ಸೆರೆಹಿಡಿದಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಾರ್ಯ ಪರಿಸರದಲ್ಲಿ ಹಲವು ಮನೆಗಳು ಇದ್ದು ಇಲ್ಲಿನ ಮಂದಿ ಚಿರತೆ ಓಡಾಟದಿಂದ ಭಯ ಭೀತರಾಗಿದ್ದಾರೆ. ಈ ಭಾಗದಲ್ಲಿ ಧರ್ಮಸ್ಥಳ ಮೀಸಲು ಅರಣ್ಯ ಹಾಗೂ ಬೆಳಾಲು ವ್ಯಾಪ್ತಿಯ ದಡಂತಮಲೆ ಅರಣ್ಯ ಪ್ರದೇಶ ಇದ್ದು ಸಾವಿರ ಎಕರೆಗೂ ಹೆಚ್ಚಿನ ಅರಣ್ಯವಿದೆ. ಆಗಾಗ ಚಿರತೆ ಓಡಾಟ ಇರುವ ಸಾಧ್ಯತೆಯೂ ಇದೆ, ಬುಧವಾರ ರಾತ್ರಿಯ ವಿಚಾರ ಖಚಿತಗೊಂಡಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya
error: Content is protected !!