ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya

Updated on:

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ತೆಂಕಕಾರಂದೂರು ಗ್ರಾಮದ ಬಾಲಕೃಷ್ಣರವರು ರಸ್ತೆ ದಾಟುವಾಗ ಕಾರೊಂದು ಡಿಕ್ಕಿ ಹೊಡೆದು ಗಾಯಾವಾದ ಘಟನೆ ಅ.26 ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಂಕಕಾರಂದೂರು ಗ್ರಾಮದ ನಿವಾಸಿ ಬಾಲಕೃಷ್ಣ(40) ಎಂಬವರ ದೂರಿನಂತೆ,ಅ.26 ರಂದು ಬೆಳಿಗ್ಗೆ ಬೆಳ್ತಂಗಡಿ ಕಸಬಾ ಗ್ರಾಮದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ರಸ್ತೆ ದಾಟುವರೇ ನಿಂತುಕೊಂಡಿರುವಾಗ, KA-16-AA-6439 ನೇ ಕಾರನ್ನು ಅದರ ಚಾಲಕ ಆಂಜನೇಯ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕೃಷ್ಣರವರಿಗೆ ಗಾಯಗೊಂಡಿದ್ದು, ಗಾಯಾಳು ಬಾಲಕೃಷ್ಣರವರು ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿಅ.ಕ್ರ: 104/2023 ಕಲಂ: 279,338,ಭಾ.ದಂ.ಸಂ ರಂತೆ ಪ್ರಕರಣ ದಾಖಲಾಗಿದೆ.

Leave a Comment

error: Content is protected !!