ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮವನ್ನು ಅ.26 ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ. ಎನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರಮ್ಯ, ಸಮಾಲೋಚಕರು, ಎಸ್.ಕೆ.ಆರ್.ಕೆ ಸರ್ಕಾರಿ ಆಸ್ಪತ್ರೆ ಬೆಳ್ತಂಗಡಿ, ಆಗಮಿಸಿದ್ದರು. ಶ್ರೀಮತಿ ರಮ್ಯಾ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ವಯಂ ಅರಿವು, ಹದಿಹರೆಯದವರ ಆರೋಗ್ಯದ ಕಾಳಜಿಯ ಪ್ರಾಮುಖ್ಯತೆಯನ್ನು ತಿಳಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

ಕಾರ್ಯಕ್ರಮದಲ್ಲಿ ಪ್ರೊಫೆಸರ್ ಪದ್ಮನಾಭ ಕೆ, ಪ್ರೊ| ಸುರೇಶ್ ವಿ ಹಾಗೂ ಪ್ರೊ| ರಾಜೇಶ್ವರಿ ಉಪಸ್ಥಿತರಿದ್ದರು. ಕು| ಸ್ವಾತಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ವನಿತಾ ಧನ್ಯವಾದವಿತ್ತರು.

Leave a Comment

error: Content is protected !!