24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

ಬೆಳ್ತಂಗಡಿ : ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂ. ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

2022 ಜುಲೈ 26 ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತ ಆರೋಪಿ ನಂಬರ್ 23 ಅಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್(32ವ) ಎಂಬಾತ, ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ ಮಾಡಿದ್ದರು. ಈ ವೇಳೆ ನೌಷದ್ ಪ್ರಕರಣ ನಡೆದ ಬಳಿಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಎನ್.ಐ.ಎ ಅಧಿಕಾರಿಗಳು ನೋಟಿಸ್ ನೀಡಿ ಹೋಗಿದ್ದರು.

ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ನೌಷದ್ ಬಗ್ಗೆ ಸುಳಿವು ನೀಡಿದವರಿಗೆ ಎನ್.ಐ.ಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಲ್ಲಿ ಮಾಹಿತಿ ಗೌಪ್ಯವಾಗಿಟ್ಟು ಆ ವ್ಯಕ್ತಿಗೆ ಎರಡು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿರುವುದಾಗಿ ಎನ್.ಐ.ಎ ಪತ್ರಿಕಾ ಪ್ರಕರಣೆ ಹೊರಡಿಸಿದ್ದಾರೆ.

Related posts

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

* ಸೌತಡ್ಕ ದೇವಸ್ಥಾನದದಲ್ಲಿ 24,586 ಕೆ.ಜಿ. ಗಂಟೆ ಹಗರಣ ಆಗಿರುವ ಸಂಶಯವಿದೆ. * ಸವಿಸ್ತಾರ ತನಿಖೆಯನ್ನು ಕೈಗೊಳ್ಳಬಹುದು ಹಿಂದಿನ ತನಿಖಾ ವರದಿಯಲ್ಲಿ ಉಲ್ಲೇಖ. *ಮರು ತನಿಖೆಗೆ ಫೆ.20ರಂದು ಜಿಲ್ಲಾಧಿಕಾರಿಗಳ ಆದೇಶ * ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ಪೂವಾಜೆ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!