27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

ಬೆಳ್ತಂಗಡಿ : ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂ. ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

2022 ಜುಲೈ 26 ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತ ಆರೋಪಿ ನಂಬರ್ 23 ಅಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್(32ವ) ಎಂಬಾತ, ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ ಮಾಡಿದ್ದರು. ಈ ವೇಳೆ ನೌಷದ್ ಪ್ರಕರಣ ನಡೆದ ಬಳಿಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಎನ್.ಐ.ಎ ಅಧಿಕಾರಿಗಳು ನೋಟಿಸ್ ನೀಡಿ ಹೋಗಿದ್ದರು.

ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ನೌಷದ್ ಬಗ್ಗೆ ಸುಳಿವು ನೀಡಿದವರಿಗೆ ಎನ್.ಐ.ಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಲ್ಲಿ ಮಾಹಿತಿ ಗೌಪ್ಯವಾಗಿಟ್ಟು ಆ ವ್ಯಕ್ತಿಗೆ ಎರಡು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿರುವುದಾಗಿ ಎನ್.ಐ.ಎ ಪತ್ರಿಕಾ ಪ್ರಕರಣೆ ಹೊರಡಿಸಿದ್ದಾರೆ.

Related posts

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ : ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ: ರಕ್ಷಿತ್ ಶಿವರಾಂ

Suddi Udaya

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ – ಡಿ .ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ: ‌ಸುದ್ದಿ ಉದಯ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರ ವ್ಯಾಪಕ ಮೆಚ್ಚುಗೆ

Suddi Udaya
error: Content is protected !!