July 23, 2026
Uncategorized

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

ಬೆಳ್ತಂಗಡಿ : ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂ. ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

2022 ಜುಲೈ 26 ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತ ಆರೋಪಿ ನಂಬರ್ 23 ಅಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್(32ವ) ಎಂಬಾತ, ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ ಮಾಡಿದ್ದರು. ಈ ವೇಳೆ ನೌಷದ್ ಪ್ರಕರಣ ನಡೆದ ಬಳಿಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಎನ್.ಐ.ಎ ಅಧಿಕಾರಿಗಳು ನೋಟಿಸ್ ನೀಡಿ ಹೋಗಿದ್ದರು.

ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ನೌಷದ್ ಬಗ್ಗೆ ಸುಳಿವು ನೀಡಿದವರಿಗೆ ಎನ್.ಐ.ಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಲ್ಲಿ ಮಾಹಿತಿ ಗೌಪ್ಯವಾಗಿಟ್ಟು ಆ ವ್ಯಕ್ತಿಗೆ ಎರಡು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿರುವುದಾಗಿ ಎನ್.ಐ.ಎ ಪತ್ರಿಕಾ ಪ್ರಕರಣೆ ಹೊರಡಿಸಿದ್ದಾರೆ.

Related posts

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya
error: Content is protected !!