September 6, 2026
Uncategorized

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

ಬೆಳ್ತಂಗಡಿ : ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂ. ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

2022 ಜುಲೈ 26 ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತ ಆರೋಪಿ ನಂಬರ್ 23 ಅಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್(32ವ) ಎಂಬಾತ, ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ ಮಾಡಿದ್ದರು. ಈ ವೇಳೆ ನೌಷದ್ ಪ್ರಕರಣ ನಡೆದ ಬಳಿಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಎನ್.ಐ.ಎ ಅಧಿಕಾರಿಗಳು ನೋಟಿಸ್ ನೀಡಿ ಹೋಗಿದ್ದರು.

ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ನೌಷದ್ ಬಗ್ಗೆ ಸುಳಿವು ನೀಡಿದವರಿಗೆ ಎನ್.ಐ.ಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಲ್ಲಿ ಮಾಹಿತಿ ಗೌಪ್ಯವಾಗಿಟ್ಟು ಆ ವ್ಯಕ್ತಿಗೆ ಎರಡು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿರುವುದಾಗಿ ಎನ್.ಐ.ಎ ಪತ್ರಿಕಾ ಪ್ರಕರಣೆ ಹೊರಡಿಸಿದ್ದಾರೆ.

Related posts

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

Suddi Udaya

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!