23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

ಬೆಳ್ತಂಗಡಿ: ಶನಿವಾರ ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ಅ.28ಕ್ಕೆ ಚಂದ್ರಗ್ರಹಣ (Lunar Eclipse 2023) ನಡೆಯಲಿದ್ದು, ಅಕ್ಟೋಬರ್ 29ಕ್ಕೂ ಇದರ ಪ್ರಭಾವ ತಟ್ಟಲಿದೆ. ಜ್ಯೋತಿಷ್ಯದ ಪ್ರಕಾರ ಗ್ರಹಣ ಅಮಂಗಳ, ಸೂತಕದ ಛಾಯೆ ಎನ್ನುವ ನಂಬಿಕೆ ಇದೆ. ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದ್ದು ಭಾರತದಲ್ಲಿಯೂ ಗೋಚರಿಸಲಿದೆ.

ಗ್ರಹಣದ ಅವಧಿ (ವಿಜ್ಞಾನಿಗಳ ಪ್ರಕಾರ): ಅಕ್ಟೋಬರ್ -28ರ ರಾತ್ರಿ 11.30ಕ್ಕೆ ಸಂಭವಿಸಿ ಅಕ್ಟೋಬರ್ 29 ರ 2.30ರವರೆಗೆ ಇರಲಿದೆ. ಗ್ರಹಣದ ಅವಧಿ (ಜ್ಯೋತಿಷಿಗಳ ಪ್ರಕಾರ): ಮಧ್ಯರಾತ್ರಿ 1.04 ಕ್ಕೆ ಆರಂಭ. 2:22ಕ್ಕೆ ಅಂತ್ಯವಾಗಲಿದೆ ಎಂದಿದೆ.

ರಾಹುಗ್ರಸ್ಥ ಚಂದ್ರಗ್ರಹಣ ಎನ್ನಲಾಗಿದ್ದು, ಭಾರತದಲ್ಲೂ ಗೋಚರಿಸಲಿದೆ. ಶರದ್ ಪೂರ್ಣಿಮೆಯ ರಾತ್ರಿಯಲ್ಲಿ ಈ ಗ್ರಹಣ ಸಂಭವಿಸಲಿದ್ದು, ಗಜಕೇಸರಿ ಯೋಗದಲ್ಲಿ ಈ ಬಾರಿ ಚಂದ್ರಗ್ರಹಣ ಸಂಭವಿಸಲಿದ್ದು ಎಂದು ಜೋತಿಷ್ಯ ಶಾಸ್ತ್ರ ಹೇಳಿದೆ.

ಸಾಮಾನ್ಯವಾಗಿ ಗಜಕೇಸರಿ ಯೋಗದಲ್ಲಿ ಗ್ರಹಣ ಬಹಳ ಅಪರೂಪವಾಗಿದೆ. 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ ಇದಾಗಿದೆ. ವಿಜ್ಞಾನಿಗಳ ಪಾಲಿಗೆ ಇದು ವಿಸ್ಮಯವಾಗಲಿದೆ.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

Suddi Udaya

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!