September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

ಬೆಳ್ತಂಗಡಿ: ಶನಿವಾರ ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ಅ.28ಕ್ಕೆ ಚಂದ್ರಗ್ರಹಣ (Lunar Eclipse 2023) ನಡೆಯಲಿದ್ದು, ಅಕ್ಟೋಬರ್ 29ಕ್ಕೂ ಇದರ ಪ್ರಭಾವ ತಟ್ಟಲಿದೆ. ಜ್ಯೋತಿಷ್ಯದ ಪ್ರಕಾರ ಗ್ರಹಣ ಅಮಂಗಳ, ಸೂತಕದ ಛಾಯೆ ಎನ್ನುವ ನಂಬಿಕೆ ಇದೆ. ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದ್ದು ಭಾರತದಲ್ಲಿಯೂ ಗೋಚರಿಸಲಿದೆ.

ಗ್ರಹಣದ ಅವಧಿ (ವಿಜ್ಞಾನಿಗಳ ಪ್ರಕಾರ): ಅಕ್ಟೋಬರ್ -28ರ ರಾತ್ರಿ 11.30ಕ್ಕೆ ಸಂಭವಿಸಿ ಅಕ್ಟೋಬರ್ 29 ರ 2.30ರವರೆಗೆ ಇರಲಿದೆ. ಗ್ರಹಣದ ಅವಧಿ (ಜ್ಯೋತಿಷಿಗಳ ಪ್ರಕಾರ): ಮಧ್ಯರಾತ್ರಿ 1.04 ಕ್ಕೆ ಆರಂಭ. 2:22ಕ್ಕೆ ಅಂತ್ಯವಾಗಲಿದೆ ಎಂದಿದೆ.

ರಾಹುಗ್ರಸ್ಥ ಚಂದ್ರಗ್ರಹಣ ಎನ್ನಲಾಗಿದ್ದು, ಭಾರತದಲ್ಲೂ ಗೋಚರಿಸಲಿದೆ. ಶರದ್ ಪೂರ್ಣಿಮೆಯ ರಾತ್ರಿಯಲ್ಲಿ ಈ ಗ್ರಹಣ ಸಂಭವಿಸಲಿದ್ದು, ಗಜಕೇಸರಿ ಯೋಗದಲ್ಲಿ ಈ ಬಾರಿ ಚಂದ್ರಗ್ರಹಣ ಸಂಭವಿಸಲಿದ್ದು ಎಂದು ಜೋತಿಷ್ಯ ಶಾಸ್ತ್ರ ಹೇಳಿದೆ.

ಸಾಮಾನ್ಯವಾಗಿ ಗಜಕೇಸರಿ ಯೋಗದಲ್ಲಿ ಗ್ರಹಣ ಬಹಳ ಅಪರೂಪವಾಗಿದೆ. 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ ಇದಾಗಿದೆ. ವಿಜ್ಞಾನಿಗಳ ಪಾಲಿಗೆ ಇದು ವಿಸ್ಮಯವಾಗಲಿದೆ.

Related posts

ಅಶೋಕ್ ಜೈನ್ ರವರಿಗೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸನ್ಮಾನ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya
error: Content is protected !!