24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ: ಉಜಿರೆಯ ಸಮೀಪದ ಕನ್ಯಾಡಿ-2 ಗ್ರಾಮದ ನಾರ್ಯ ಮೂರು ಮಾರ್ಗ ಎಂಬಲ್ಲಿ ಅ.25 ರಂದು ರಾತ್ರಿ ಚಿರತೆ ಕಂಡು ಬಂದಿರುವ ಕುರಿತು ತಿಳಿದು ಬಂದಿದೆ.

ರಾತ್ರಿ ಸಮಯ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಮೀಪದ ಪಾಣೇಲಿನ ವ್ಯಕ್ತಿಗೆ ಚಿರತೆ ಕಂಡು ಬಂದಿದೆ ಎಂದು ಹೇಳಲಾಗುತ್ತಿದ್ದು, ಚಿರತೆಯ ಚಿತ್ರ ಸೆರೆಹಿಡಿದಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಾರ್ಯ ಪರಿಸರದಲ್ಲಿ ಹಲವು ಮನೆಗಳು ಇದ್ದು ಇಲ್ಲಿನ ಮಂದಿ ಚಿರತೆ ಓಡಾಟದಿಂದ ಭಯ ಭೀತರಾಗಿದ್ದಾರೆ. ಈ ಭಾಗದಲ್ಲಿ ಧರ್ಮಸ್ಥಳ ಮೀಸಲು ಅರಣ್ಯ ಹಾಗೂ ಬೆಳಾಲು ವ್ಯಾಪ್ತಿಯ ದಡಂತಮಲೆ ಅರಣ್ಯ ಪ್ರದೇಶ ಇದ್ದು ಸಾವಿರ ಎಕರೆಗೂ ಹೆಚ್ಚಿನ ಅರಣ್ಯವಿದೆ. ಆಗಾಗ ಚಿರತೆ ಓಡಾಟ ಇರುವ ಸಾಧ್ಯತೆಯೂ ಇದೆ, ಬುಧವಾರ ರಾತ್ರಿಯ ವಿಚಾರ ಖಚಿತಗೊಂಡಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!