September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ: ಉಜಿರೆಯ ಸಮೀಪದ ಕನ್ಯಾಡಿ-2 ಗ್ರಾಮದ ನಾರ್ಯ ಮೂರು ಮಾರ್ಗ ಎಂಬಲ್ಲಿ ಅ.25 ರಂದು ರಾತ್ರಿ ಚಿರತೆ ಕಂಡು ಬಂದಿರುವ ಕುರಿತು ತಿಳಿದು ಬಂದಿದೆ.

ರಾತ್ರಿ ಸಮಯ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಮೀಪದ ಪಾಣೇಲಿನ ವ್ಯಕ್ತಿಗೆ ಚಿರತೆ ಕಂಡು ಬಂದಿದೆ ಎಂದು ಹೇಳಲಾಗುತ್ತಿದ್ದು, ಚಿರತೆಯ ಚಿತ್ರ ಸೆರೆಹಿಡಿದಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಾರ್ಯ ಪರಿಸರದಲ್ಲಿ ಹಲವು ಮನೆಗಳು ಇದ್ದು ಇಲ್ಲಿನ ಮಂದಿ ಚಿರತೆ ಓಡಾಟದಿಂದ ಭಯ ಭೀತರಾಗಿದ್ದಾರೆ. ಈ ಭಾಗದಲ್ಲಿ ಧರ್ಮಸ್ಥಳ ಮೀಸಲು ಅರಣ್ಯ ಹಾಗೂ ಬೆಳಾಲು ವ್ಯಾಪ್ತಿಯ ದಡಂತಮಲೆ ಅರಣ್ಯ ಪ್ರದೇಶ ಇದ್ದು ಸಾವಿರ ಎಕರೆಗೂ ಹೆಚ್ಚಿನ ಅರಣ್ಯವಿದೆ. ಆಗಾಗ ಚಿರತೆ ಓಡಾಟ ಇರುವ ಸಾಧ್ಯತೆಯೂ ಇದೆ, ಬುಧವಾರ ರಾತ್ರಿಯ ವಿಚಾರ ಖಚಿತಗೊಂಡಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಮುಂಡಾಜೆ: ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!