22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ತೆಂಕಕಾರಂದೂರು ಗ್ರಾಮದ ಬಾಲಕೃಷ್ಣರವರು ರಸ್ತೆ ದಾಟುವಾಗ ಕಾರೊಂದು ಡಿಕ್ಕಿ ಹೊಡೆದು ಗಾಯಾವಾದ ಘಟನೆ ಅ.26 ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಂಕಕಾರಂದೂರು ಗ್ರಾಮದ ನಿವಾಸಿ ಬಾಲಕೃಷ್ಣ(40) ಎಂಬವರ ದೂರಿನಂತೆ,ಅ.26 ರಂದು ಬೆಳಿಗ್ಗೆ ಬೆಳ್ತಂಗಡಿ ಕಸಬಾ ಗ್ರಾಮದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ರಸ್ತೆ ದಾಟುವರೇ ನಿಂತುಕೊಂಡಿರುವಾಗ, KA-16-AA-6439 ನೇ ಕಾರನ್ನು ಅದರ ಚಾಲಕ ಆಂಜನೇಯ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕೃಷ್ಣರವರಿಗೆ ಗಾಯಗೊಂಡಿದ್ದು, ಗಾಯಾಳು ಬಾಲಕೃಷ್ಣರವರು ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿಅ.ಕ್ರ: 104/2023 ಕಲಂ: 279,338,ಭಾ.ದಂ.ಸಂ ರಂತೆ ಪ್ರಕರಣ ದಾಖಲಾಗಿದೆ.

Related posts

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಮಡಂತ್ಯಾರು ನೇಸರ ಸಂಜೀವಿನಿ ಒಕ್ಕೂಟದ ಮಸಾಲಾ ಉತ್ಪನ್ನಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!