23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

ಬೆಳ್ತಂಗಡಿ : ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂ. ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

2022 ಜುಲೈ 26 ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತ ಆರೋಪಿ ನಂಬರ್ 23 ಅಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್(32ವ) ಎಂಬಾತ, ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ ಮಾಡಿದ್ದರು. ಈ ವೇಳೆ ನೌಷದ್ ಪ್ರಕರಣ ನಡೆದ ಬಳಿಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಎನ್.ಐ.ಎ ಅಧಿಕಾರಿಗಳು ನೋಟಿಸ್ ನೀಡಿ ಹೋಗಿದ್ದರು.

ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ನೌಷದ್ ಬಗ್ಗೆ ಸುಳಿವು ನೀಡಿದವರಿಗೆ ಎನ್.ಐ.ಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಲ್ಲಿ ಮಾಹಿತಿ ಗೌಪ್ಯವಾಗಿಟ್ಟು ಆ ವ್ಯಕ್ತಿಗೆ ಎರಡು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿರುವುದಾಗಿ ಎನ್.ಐ.ಎ ಪತ್ರಿಕಾ ಪ್ರಕರಣೆ ಹೊರಡಿಸಿದ್ದಾರೆ.

Related posts

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya
error: Content is protected !!