38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

ಕೊಯ್ಯೂರು : ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಂಚ ದುರ್ಗಾ ಸಹಕಾರ ಸಭಾಭವನದಲ್ಲಿ ನವೋದಯ ಸ್ವಸಹಾಯ ಗುಂಪುಗಳಿಗೆ ಮಾಹಿತಿ ಶಿಬಿರ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಭಾರ ಪ್ರಾಂಶುಪಾಲರಾಗಿದ್ದು ವರ್ಗಾವಣೆ ಗೊಂಡ ಬಾಲಕೃಷ್ಣ ಬೇರಿಕೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ಸನ್ಮಾನಿತರ ಪರಿಚಯ ಮಾಡಿದರು. ನೂತನ ಪ್ರಭಾರ ಪ್ರಾಂಶುಪಾಲ ಮೋಹನಗೌಡ ಬಂಡಾರಿಕೋಡಿ ಇವರನ್ನು ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ನವೋದಯ ಸ್ವ ಸಹಾಯ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರವನ್ನು ನವೋದಯ ಜಿಲ್ಲಾ ಮೇಲ್ವಿಚಾರಕ ರಂಜಿತ್ ಕುಮಾರ್ ಮತ್ತು ಸ್ಟಾನ್ಲಿ ಪಿಂಟೋ, ನಡೆಸಿಕೊಟ್ಟರು.


ನವೋದಯ ಸ್ವಸಹಾಯ ಬಗ್ಗೆ ಸಂಘದ ನಿರ್ದೇಶಕ ಅಶೋಕ್ ಕುಮಾರ್ ಅಗ್ರಸಾಲೆ ಪ್ರಾಸ್ತಾವಿಕವಾಗಿ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ರಾಜೇಂದ್ರ ಕುಮಾರ್ ಇವರು ಸದಸ್ಯರ ಅಭ್ಯುದಯದ ದೃಷ್ಟಿಯಿಂದ ಕೈಗೊಂಡ ಅನೇಕ ವಿಚಾರಗಳನ್ನು ಸದಸ್ಯರಿಗೆ ತಿಳಿ ಹೇಳಿದರು. 2 ಹೊಸ ಸ್ವಸಹಾಯ ಸಂಘ ರಚನೆ ಮಾಡಲಾಯಿತು. ನವೋದಯದ ಸದಸ್ಯರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು . ನಮ್ಮ ಸಂಘದ ಅಧ್ಯಕ್ಷ ನವೀನ್ ಕುಮಾರ್ ಅಧ್ಯಕ್ಷತೆ ವಹಿಸಿ ನವೋದಯ ಸ್ವಸಹಾಯ ಸಂಘದ ಸದಸ್ಯರುಗಳಿಗೆ ಬ್ಯಾಗ್ ವಿತರಣೆ ಮಾಡುತ್ತಾ 150ಸ್ವಸಹಾಯ ಸಂಘಗಳು ಸಕ್ರಿಯವಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಕೇಂದ್ರ ರಾಜ್ಯ ಸರಕಾರ ನೀಡುತ್ತಿರುವ ಸವಲತ್ತು ಮತ್ತು ಎಸ್ ಸಿ ಡಿ ಸಿ ಸಿ ಬ್ಯಾಂಕ್ ಇದರ ಅಧಿಕಾರಿಗಳು ನೀಡುತ್ತಿರುವ ಸಹಕಾರದೊಂದಿಗೆ ಸಹಕಾರ ಸಂಘ ಉತ್ತಮ ಸಾಧನೆ ಮಾಡುವಲ್ಲಿ ನೆರವಾಗಿದೆ ಎಂದು ತಿಳಿಸಿದರು.

ನವೋದಯ ಸ್ವ ಸಹಾಯ ಸಂಘದ ಪ್ರೇರಕಿ ಚಂಪಾರವರ ಕಾರ್ಯಕ್ರಮದ ಸಂಯೋಜನೆ ಮತ್ತು ಸಂಘದ ಸಿಬ್ಬಂದಿಯವರು ಅಚ್ಚುಕಟ್ಟಾಗಿ ಕಾರ್ಯಕ್ರಮ ವ್ಯವಸ್ಥೆಗೊಳಿಸಿದರು. ನಿರ್ದೇಶಕರುಗಳಾದ ಡೀಕಯ್ಯ ಪೂಜಾರಿ, ಪರಮೇಶ್ವರ ಗೌಡ, ಹೊನ್ನಪ್ಪ ಪೂಜಾರಿ, ಪುರುಷೋತ್ತಮ, ಯತೀಶ ದಡ್ಡು, ಗುಲಾಬಿ, ಶ್ರೀಮತಿ ರೇವತಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೇತ್ರ ನವೋದಯ ಸ್ವಸಹಾಯ ಸಂಘದ ಕುಮಾರಿ ಕುಸುಮ ರವರ ಪ್ರಾರ್ಥನೆ ಮತ್ತು ನಿರ್ದೇಶಕ ಉಜ್ವಲ್ ಕುಮಾರ್ ಸ್ವಾಗತಿಸಿದರು ಮತ್ತು ಸಂಘದ ನಿರ್ದೇಶಕ ರವೀಂದ್ರನಾಥ್ ಪೆರ್ಮುದೆ ವಂದಿಸಿದರು.

Related posts

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya
error: Content is protected !!