April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

ಕೊಯ್ಯೂರು : ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಂಚ ದುರ್ಗಾ ಸಹಕಾರ ಸಭಾಭವನದಲ್ಲಿ ನವೋದಯ ಸ್ವಸಹಾಯ ಗುಂಪುಗಳಿಗೆ ಮಾಹಿತಿ ಶಿಬಿರ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಭಾರ ಪ್ರಾಂಶುಪಾಲರಾಗಿದ್ದು ವರ್ಗಾವಣೆ ಗೊಂಡ ಬಾಲಕೃಷ್ಣ ಬೇರಿಕೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ಸನ್ಮಾನಿತರ ಪರಿಚಯ ಮಾಡಿದರು. ನೂತನ ಪ್ರಭಾರ ಪ್ರಾಂಶುಪಾಲ ಮೋಹನಗೌಡ ಬಂಡಾರಿಕೋಡಿ ಇವರನ್ನು ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ನವೋದಯ ಸ್ವ ಸಹಾಯ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರವನ್ನು ನವೋದಯ ಜಿಲ್ಲಾ ಮೇಲ್ವಿಚಾರಕ ರಂಜಿತ್ ಕುಮಾರ್ ಮತ್ತು ಸ್ಟಾನ್ಲಿ ಪಿಂಟೋ, ನಡೆಸಿಕೊಟ್ಟರು.


ನವೋದಯ ಸ್ವಸಹಾಯ ಬಗ್ಗೆ ಸಂಘದ ನಿರ್ದೇಶಕ ಅಶೋಕ್ ಕುಮಾರ್ ಅಗ್ರಸಾಲೆ ಪ್ರಾಸ್ತಾವಿಕವಾಗಿ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ರಾಜೇಂದ್ರ ಕುಮಾರ್ ಇವರು ಸದಸ್ಯರ ಅಭ್ಯುದಯದ ದೃಷ್ಟಿಯಿಂದ ಕೈಗೊಂಡ ಅನೇಕ ವಿಚಾರಗಳನ್ನು ಸದಸ್ಯರಿಗೆ ತಿಳಿ ಹೇಳಿದರು. 2 ಹೊಸ ಸ್ವಸಹಾಯ ಸಂಘ ರಚನೆ ಮಾಡಲಾಯಿತು. ನವೋದಯದ ಸದಸ್ಯರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು . ನಮ್ಮ ಸಂಘದ ಅಧ್ಯಕ್ಷ ನವೀನ್ ಕುಮಾರ್ ಅಧ್ಯಕ್ಷತೆ ವಹಿಸಿ ನವೋದಯ ಸ್ವಸಹಾಯ ಸಂಘದ ಸದಸ್ಯರುಗಳಿಗೆ ಬ್ಯಾಗ್ ವಿತರಣೆ ಮಾಡುತ್ತಾ 150ಸ್ವಸಹಾಯ ಸಂಘಗಳು ಸಕ್ರಿಯವಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಕೇಂದ್ರ ರಾಜ್ಯ ಸರಕಾರ ನೀಡುತ್ತಿರುವ ಸವಲತ್ತು ಮತ್ತು ಎಸ್ ಸಿ ಡಿ ಸಿ ಸಿ ಬ್ಯಾಂಕ್ ಇದರ ಅಧಿಕಾರಿಗಳು ನೀಡುತ್ತಿರುವ ಸಹಕಾರದೊಂದಿಗೆ ಸಹಕಾರ ಸಂಘ ಉತ್ತಮ ಸಾಧನೆ ಮಾಡುವಲ್ಲಿ ನೆರವಾಗಿದೆ ಎಂದು ತಿಳಿಸಿದರು.

ನವೋದಯ ಸ್ವ ಸಹಾಯ ಸಂಘದ ಪ್ರೇರಕಿ ಚಂಪಾರವರ ಕಾರ್ಯಕ್ರಮದ ಸಂಯೋಜನೆ ಮತ್ತು ಸಂಘದ ಸಿಬ್ಬಂದಿಯವರು ಅಚ್ಚುಕಟ್ಟಾಗಿ ಕಾರ್ಯಕ್ರಮ ವ್ಯವಸ್ಥೆಗೊಳಿಸಿದರು. ನಿರ್ದೇಶಕರುಗಳಾದ ಡೀಕಯ್ಯ ಪೂಜಾರಿ, ಪರಮೇಶ್ವರ ಗೌಡ, ಹೊನ್ನಪ್ಪ ಪೂಜಾರಿ, ಪುರುಷೋತ್ತಮ, ಯತೀಶ ದಡ್ಡು, ಗುಲಾಬಿ, ಶ್ರೀಮತಿ ರೇವತಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೇತ್ರ ನವೋದಯ ಸ್ವಸಹಾಯ ಸಂಘದ ಕುಮಾರಿ ಕುಸುಮ ರವರ ಪ್ರಾರ್ಥನೆ ಮತ್ತು ನಿರ್ದೇಶಕ ಉಜ್ವಲ್ ಕುಮಾರ್ ಸ್ವಾಗತಿಸಿದರು ಮತ್ತು ಸಂಘದ ನಿರ್ದೇಶಕ ರವೀಂದ್ರನಾಥ್ ಪೆರ್ಮುದೆ ವಂದಿಸಿದರು.

Related posts

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya
error: Content is protected !!