24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

ಕೊಯ್ಯೂರು : ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಂಚ ದುರ್ಗಾ ಸಹಕಾರ ಸಭಾಭವನದಲ್ಲಿ ನವೋದಯ ಸ್ವಸಹಾಯ ಗುಂಪುಗಳಿಗೆ ಮಾಹಿತಿ ಶಿಬಿರ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮ ಜರಗಿತು.

ಈ ಸಂದರ್ಭದಲ್ಲಿ ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಭಾರ ಪ್ರಾಂಶುಪಾಲರಾಗಿದ್ದು ವರ್ಗಾವಣೆ ಗೊಂಡ ಬಾಲಕೃಷ್ಣ ಬೇರಿಕೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ಸನ್ಮಾನಿತರ ಪರಿಚಯ ಮಾಡಿದರು. ನೂತನ ಪ್ರಭಾರ ಪ್ರಾಂಶುಪಾಲ ಮೋಹನಗೌಡ ಬಂಡಾರಿಕೋಡಿ ಇವರನ್ನು ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ನವೋದಯ ಸ್ವ ಸಹಾಯ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರವನ್ನು ನವೋದಯ ಜಿಲ್ಲಾ ಮೇಲ್ವಿಚಾರಕ ರಂಜಿತ್ ಕುಮಾರ್ ಮತ್ತು ಸ್ಟಾನ್ಲಿ ಪಿಂಟೋ, ನಡೆಸಿಕೊಟ್ಟರು.


ನವೋದಯ ಸ್ವಸಹಾಯ ಬಗ್ಗೆ ಸಂಘದ ನಿರ್ದೇಶಕ ಅಶೋಕ್ ಕುಮಾರ್ ಅಗ್ರಸಾಲೆ ಪ್ರಾಸ್ತಾವಿಕವಾಗಿ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ರಾಜೇಂದ್ರ ಕುಮಾರ್ ಇವರು ಸದಸ್ಯರ ಅಭ್ಯುದಯದ ದೃಷ್ಟಿಯಿಂದ ಕೈಗೊಂಡ ಅನೇಕ ವಿಚಾರಗಳನ್ನು ಸದಸ್ಯರಿಗೆ ತಿಳಿ ಹೇಳಿದರು. 2 ಹೊಸ ಸ್ವಸಹಾಯ ಸಂಘ ರಚನೆ ಮಾಡಲಾಯಿತು. ನವೋದಯದ ಸದಸ್ಯರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು . ನಮ್ಮ ಸಂಘದ ಅಧ್ಯಕ್ಷ ನವೀನ್ ಕುಮಾರ್ ಅಧ್ಯಕ್ಷತೆ ವಹಿಸಿ ನವೋದಯ ಸ್ವಸಹಾಯ ಸಂಘದ ಸದಸ್ಯರುಗಳಿಗೆ ಬ್ಯಾಗ್ ವಿತರಣೆ ಮಾಡುತ್ತಾ 150ಸ್ವಸಹಾಯ ಸಂಘಗಳು ಸಕ್ರಿಯವಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಕೇಂದ್ರ ರಾಜ್ಯ ಸರಕಾರ ನೀಡುತ್ತಿರುವ ಸವಲತ್ತು ಮತ್ತು ಎಸ್ ಸಿ ಡಿ ಸಿ ಸಿ ಬ್ಯಾಂಕ್ ಇದರ ಅಧಿಕಾರಿಗಳು ನೀಡುತ್ತಿರುವ ಸಹಕಾರದೊಂದಿಗೆ ಸಹಕಾರ ಸಂಘ ಉತ್ತಮ ಸಾಧನೆ ಮಾಡುವಲ್ಲಿ ನೆರವಾಗಿದೆ ಎಂದು ತಿಳಿಸಿದರು.

ನವೋದಯ ಸ್ವ ಸಹಾಯ ಸಂಘದ ಪ್ರೇರಕಿ ಚಂಪಾರವರ ಕಾರ್ಯಕ್ರಮದ ಸಂಯೋಜನೆ ಮತ್ತು ಸಂಘದ ಸಿಬ್ಬಂದಿಯವರು ಅಚ್ಚುಕಟ್ಟಾಗಿ ಕಾರ್ಯಕ್ರಮ ವ್ಯವಸ್ಥೆಗೊಳಿಸಿದರು. ನಿರ್ದೇಶಕರುಗಳಾದ ಡೀಕಯ್ಯ ಪೂಜಾರಿ, ಪರಮೇಶ್ವರ ಗೌಡ, ಹೊನ್ನಪ್ಪ ಪೂಜಾರಿ, ಪುರುಷೋತ್ತಮ, ಯತೀಶ ದಡ್ಡು, ಗುಲಾಬಿ, ಶ್ರೀಮತಿ ರೇವತಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೇತ್ರ ನವೋದಯ ಸ್ವಸಹಾಯ ಸಂಘದ ಕುಮಾರಿ ಕುಸುಮ ರವರ ಪ್ರಾರ್ಥನೆ ಮತ್ತು ನಿರ್ದೇಶಕ ಉಜ್ವಲ್ ಕುಮಾರ್ ಸ್ವಾಗತಿಸಿದರು ಮತ್ತು ಸಂಘದ ನಿರ್ದೇಶಕ ರವೀಂದ್ರನಾಥ್ ಪೆರ್ಮುದೆ ವಂದಿಸಿದರು.

Related posts

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya
error: Content is protected !!