29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ, ಕುಲಾಲ/ ಕುಂಬಾರರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇವರ ಸಹಯೋಗದೊಂದಿಗೆ ಕುಲಾಲ ಸಾಂತ್ವನ ನಿಧಿ ಸಮಿತಿ ವತಿಯಿಂದ ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ಉದ್ಘಾಟಿಸಿದರು.
ಬಳಿಕ ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನವನ್ನು ಜೂನಿಯರ್ ಕಾಲೇಜು ಬೆಳ್ತಂಗಡಿ ಉಪನ್ಯಾಸಕರಾದ ಗಣೇಶ್ ಭಟ್ ನೀಡಿದರು.

Chartered Accountant ಅಭಿನವ್ ಕುಲಾಲ್ ಇವರು CA ಕಂಪ್ಲೀಟ್ ಮಾಡುವುದು ಹೇಗೆ ಎನ್ನುವುದರ ಬಗ್ಗೆ ಮಾರ್ಗದರ್ಶನ ನೀಡಿದರು. ಉದ್ಯಮಿ ಲೋಕೇಶ್ ಕುಲಾಲ್ ಉದ್ಯಮದ ಬಗ್ಗೆ , ನಿವೃತ್ತ ಉಪತಾಶಿಲ್ದಾರ್ ಎಚ್. ಪದ್ಮ ಕುಮಾರ್ ಕಂದಾಯ ಇಲಾಖೆಯ ಬಗ್ಗೆ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಪಂಚಾಯತ್ ರಾಜ್ ಬಗ್ಗೆ ಮಾಹಿತಿ ನೀಡಿದರು. ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್, ಶಿಕ್ಷಕ ಶ್ರೀ ಜಗನ್ನಾಥ್ ಕುಲಾಲ್, ವಿಶಾಲ್ ಹಾಗೂ ಹರೀಶ್ ಇವರುಗಳು ವಿದ್ಯಾರ್ಥಿಗಳ ಜೊತೆ ನೇರ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.ಕಾರ್ಯಕ್ರಮವನ್ನ ಯತೀಶ್ ಸಿರಿಮಜಲು ಸ್ವಾಗತಿಸಿ, ಜಗನ್ನಾಥ್ ಕುಲಾಲ್ ವಂದಿಸಿದರು. ಉಪನ್ಯಾಸಕ ಸುಧೀರ್ ಕೆಎನ್ ಕಾರ್ಯಕ್ರಮ ನಿರೂಪಿಸಿದರು.

Related posts

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ