23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

ಉಜಿರೆ: ನಮ್ಮ ನಾಡಿನ ಪ್ರಸಿದ್ಧ ದೇವೀ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಆಶ್ವಯುಜ ಮಾಸದ ಹುಣ್ಣಿಮೆಯಂದು ಅ. 28 ರಂದು ಹೊರಟು ಸಾಯಂಕಾಲ ಮಂಗಳೂರಿನ ಕದ್ರಿ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸಿ ಅ.29 ಭಾನುವಾರ ಬೆಳಿಗ್ಗೆ ಕದ್ರಿಯಿಂದ ಹೊರಟ ಯಾತ್ರೆ ಮಧ್ಯಾಹ್ನ 1 ಗಂಟೆಗೆ ಉಜಿರೆಯ ಜನಾರ್ದನ ಸ್ವಾಮಿ ದೇವಾಲಯವನ್ನು ತಲುಪಿದಾಗ ಉಜಿರೆಯಲ್ಲಿ ರಥಯಾತ್ರೆಗೆ ಅದ್ದೂರಿ ಸ್ವಾಗತ ನೀಡಿ ರಥಕ್ಕೆ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಧರ್ಮ ಜಾಗೃತಿ‌ ಸಮಿತಿ ಸಂಚಾಲಕ ಶಶಿಧರ ಶೆಟ್ಟಿ ನವಶಕ್ತಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜ‌ನೆ ಡಾ.ಎಲ್ ಹೆಚ್.ಮಂಜುನಾಥ್, ಅನಿಲ್ ಕುಮಾರ್ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ಇಲ್ಲಿಂದ ಮಧ್ಯಾಹ್ನ 3 ಗಂಟೆಗೆ ಪಾದಯಾತ್ರೆಯ ಮೂಲಕ ಹೊರಟು ನಮ್ಮ ನಾಡಿನ ಪ್ರಸಿದ್ಧ ಶ್ರದ್ಧಾಕೇಂದ್ರವಾದ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಬಂದು ಪ್ರಾರ್ಥನೆಯೊಂದಿಗೆ ಧರ್ಮ ಸಂರಕ್ಷಣಯಾತ್ರೆ ಸಂಪನ್ನಗೊಳ್ಳಲಿದೆ.

Related posts

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya
error: Content is protected !!