April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

ಉಜಿರೆ: ನಮ್ಮ ನಾಡಿನ ಪ್ರಸಿದ್ಧ ದೇವೀ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಆಶ್ವಯುಜ ಮಾಸದ ಹುಣ್ಣಿಮೆಯಂದು ಅ. 28 ರಂದು ಹೊರಟು ಸಾಯಂಕಾಲ ಮಂಗಳೂರಿನ ಕದ್ರಿ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸಿ ಅ.29 ಭಾನುವಾರ ಬೆಳಿಗ್ಗೆ ಕದ್ರಿಯಿಂದ ಹೊರಟ ಯಾತ್ರೆ ಮಧ್ಯಾಹ್ನ 1 ಗಂಟೆಗೆ ಉಜಿರೆಯ ಜನಾರ್ದನ ಸ್ವಾಮಿ ದೇವಾಲಯವನ್ನು ತಲುಪಿದಾಗ ಉಜಿರೆಯಲ್ಲಿ ರಥಯಾತ್ರೆಗೆ ಅದ್ದೂರಿ ಸ್ವಾಗತ ನೀಡಿ ರಥಕ್ಕೆ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಧರ್ಮ ಜಾಗೃತಿ‌ ಸಮಿತಿ ಸಂಚಾಲಕ ಶಶಿಧರ ಶೆಟ್ಟಿ ನವಶಕ್ತಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜ‌ನೆ ಡಾ.ಎಲ್ ಹೆಚ್.ಮಂಜುನಾಥ್, ಅನಿಲ್ ಕುಮಾರ್ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ಇಲ್ಲಿಂದ ಮಧ್ಯಾಹ್ನ 3 ಗಂಟೆಗೆ ಪಾದಯಾತ್ರೆಯ ಮೂಲಕ ಹೊರಟು ನಮ್ಮ ನಾಡಿನ ಪ್ರಸಿದ್ಧ ಶ್ರದ್ಧಾಕೇಂದ್ರವಾದ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಬಂದು ಪ್ರಾರ್ಥನೆಯೊಂದಿಗೆ ಧರ್ಮ ಸಂರಕ್ಷಣಯಾತ್ರೆ ಸಂಪನ್ನಗೊಳ್ಳಲಿದೆ.

Related posts

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!