September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

ಉಜಿರೆ: ನಮ್ಮ ನಾಡಿನ ಪ್ರಸಿದ್ಧ ದೇವೀ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಆಶ್ವಯುಜ ಮಾಸದ ಹುಣ್ಣಿಮೆಯಂದು ಅ. 28 ರಂದು ಹೊರಟು ಸಾಯಂಕಾಲ ಮಂಗಳೂರಿನ ಕದ್ರಿ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸಿ ಅ.29 ಭಾನುವಾರ ಬೆಳಿಗ್ಗೆ ಕದ್ರಿಯಿಂದ ಹೊರಟ ಯಾತ್ರೆ ಮಧ್ಯಾಹ್ನ 1 ಗಂಟೆಗೆ ಉಜಿರೆಯ ಜನಾರ್ದನ ಸ್ವಾಮಿ ದೇವಾಲಯವನ್ನು ತಲುಪಿದಾಗ ಉಜಿರೆಯಲ್ಲಿ ರಥಯಾತ್ರೆಗೆ ಅದ್ದೂರಿ ಸ್ವಾಗತ ನೀಡಿ ರಥಕ್ಕೆ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಧರ್ಮ ಜಾಗೃತಿ‌ ಸಮಿತಿ ಸಂಚಾಲಕ ಶಶಿಧರ ಶೆಟ್ಟಿ ನವಶಕ್ತಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜ‌ನೆ ಡಾ.ಎಲ್ ಹೆಚ್.ಮಂಜುನಾಥ್, ಅನಿಲ್ ಕುಮಾರ್ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ಇಲ್ಲಿಂದ ಮಧ್ಯಾಹ್ನ 3 ಗಂಟೆಗೆ ಪಾದಯಾತ್ರೆಯ ಮೂಲಕ ಹೊರಟು ನಮ್ಮ ನಾಡಿನ ಪ್ರಸಿದ್ಧ ಶ್ರದ್ಧಾಕೇಂದ್ರವಾದ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಬಂದು ಪ್ರಾರ್ಥನೆಯೊಂದಿಗೆ ಧರ್ಮ ಸಂರಕ್ಷಣಯಾತ್ರೆ ಸಂಪನ್ನಗೊಳ್ಳಲಿದೆ.

Related posts

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya
error: Content is protected !!