26.1 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ, ಕುಲಾಲ/ ಕುಂಬಾರರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇವರ ಸಹಯೋಗದೊಂದಿಗೆ ಕುಲಾಲ ಸಾಂತ್ವನ ನಿಧಿ ಸಮಿತಿ ವತಿಯಿಂದ ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ಉದ್ಘಾಟಿಸಿದರು.
ಬಳಿಕ ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನವನ್ನು ಜೂನಿಯರ್ ಕಾಲೇಜು ಬೆಳ್ತಂಗಡಿ ಉಪನ್ಯಾಸಕರಾದ ಗಣೇಶ್ ಭಟ್ ನೀಡಿದರು.

Chartered Accountant ಅಭಿನವ್ ಕುಲಾಲ್ ಇವರು CA ಕಂಪ್ಲೀಟ್ ಮಾಡುವುದು ಹೇಗೆ ಎನ್ನುವುದರ ಬಗ್ಗೆ ಮಾರ್ಗದರ್ಶನ ನೀಡಿದರು. ಉದ್ಯಮಿ ಲೋಕೇಶ್ ಕುಲಾಲ್ ಉದ್ಯಮದ ಬಗ್ಗೆ , ನಿವೃತ್ತ ಉಪತಾಶಿಲ್ದಾರ್ ಎಚ್. ಪದ್ಮ ಕುಮಾರ್ ಕಂದಾಯ ಇಲಾಖೆಯ ಬಗ್ಗೆ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಪಂಚಾಯತ್ ರಾಜ್ ಬಗ್ಗೆ ಮಾಹಿತಿ ನೀಡಿದರು. ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್, ಶಿಕ್ಷಕ ಶ್ರೀ ಜಗನ್ನಾಥ್ ಕುಲಾಲ್, ವಿಶಾಲ್ ಹಾಗೂ ಹರೀಶ್ ಇವರುಗಳು ವಿದ್ಯಾರ್ಥಿಗಳ ಜೊತೆ ನೇರ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.ಕಾರ್ಯಕ್ರಮವನ್ನ ಯತೀಶ್ ಸಿರಿಮಜಲು ಸ್ವಾಗತಿಸಿ, ಜಗನ್ನಾಥ್ ಕುಲಾಲ್ ವಂದಿಸಿದರು. ಉಪನ್ಯಾಸಕ ಸುಧೀರ್ ಕೆಎನ್ ಕಾರ್ಯಕ್ರಮ ನಿರೂಪಿಸಿದರು.

Related posts

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya
error: Content is protected !!