23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ, ಕುಲಾಲ/ ಕುಂಬಾರರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇವರ ಸಹಯೋಗದೊಂದಿಗೆ ಕುಲಾಲ ಸಾಂತ್ವನ ನಿಧಿ ಸಮಿತಿ ವತಿಯಿಂದ ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ಉದ್ಘಾಟಿಸಿದರು.
ಬಳಿಕ ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನವನ್ನು ಜೂನಿಯರ್ ಕಾಲೇಜು ಬೆಳ್ತಂಗಡಿ ಉಪನ್ಯಾಸಕರಾದ ಗಣೇಶ್ ಭಟ್ ನೀಡಿದರು.

Chartered Accountant ಅಭಿನವ್ ಕುಲಾಲ್ ಇವರು CA ಕಂಪ್ಲೀಟ್ ಮಾಡುವುದು ಹೇಗೆ ಎನ್ನುವುದರ ಬಗ್ಗೆ ಮಾರ್ಗದರ್ಶನ ನೀಡಿದರು. ಉದ್ಯಮಿ ಲೋಕೇಶ್ ಕುಲಾಲ್ ಉದ್ಯಮದ ಬಗ್ಗೆ , ನಿವೃತ್ತ ಉಪತಾಶಿಲ್ದಾರ್ ಎಚ್. ಪದ್ಮ ಕುಮಾರ್ ಕಂದಾಯ ಇಲಾಖೆಯ ಬಗ್ಗೆ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಪಂಚಾಯತ್ ರಾಜ್ ಬಗ್ಗೆ ಮಾಹಿತಿ ನೀಡಿದರು. ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್, ಶಿಕ್ಷಕ ಶ್ರೀ ಜಗನ್ನಾಥ್ ಕುಲಾಲ್, ವಿಶಾಲ್ ಹಾಗೂ ಹರೀಶ್ ಇವರುಗಳು ವಿದ್ಯಾರ್ಥಿಗಳ ಜೊತೆ ನೇರ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.ಕಾರ್ಯಕ್ರಮವನ್ನ ಯತೀಶ್ ಸಿರಿಮಜಲು ಸ್ವಾಗತಿಸಿ, ಜಗನ್ನಾಥ್ ಕುಲಾಲ್ ವಂದಿಸಿದರು. ಉಪನ್ಯಾಸಕ ಸುಧೀರ್ ಕೆಎನ್ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya
error: Content is protected !!