September 6, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ, ಕುಲಾಲ/ ಕುಂಬಾರರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇವರ ಸಹಯೋಗದೊಂದಿಗೆ ಕುಲಾಲ ಸಾಂತ್ವನ ನಿಧಿ ಸಮಿತಿ ವತಿಯಿಂದ ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ಉದ್ಘಾಟಿಸಿದರು.
ಬಳಿಕ ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನವನ್ನು ಜೂನಿಯರ್ ಕಾಲೇಜು ಬೆಳ್ತಂಗಡಿ ಉಪನ್ಯಾಸಕರಾದ ಗಣೇಶ್ ಭಟ್ ನೀಡಿದರು.

Chartered Accountant ಅಭಿನವ್ ಕುಲಾಲ್ ಇವರು CA ಕಂಪ್ಲೀಟ್ ಮಾಡುವುದು ಹೇಗೆ ಎನ್ನುವುದರ ಬಗ್ಗೆ ಮಾರ್ಗದರ್ಶನ ನೀಡಿದರು. ಉದ್ಯಮಿ ಲೋಕೇಶ್ ಕುಲಾಲ್ ಉದ್ಯಮದ ಬಗ್ಗೆ , ನಿವೃತ್ತ ಉಪತಾಶಿಲ್ದಾರ್ ಎಚ್. ಪದ್ಮ ಕುಮಾರ್ ಕಂದಾಯ ಇಲಾಖೆಯ ಬಗ್ಗೆ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಪಂಚಾಯತ್ ರಾಜ್ ಬಗ್ಗೆ ಮಾಹಿತಿ ನೀಡಿದರು. ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್, ಶಿಕ್ಷಕ ಶ್ರೀ ಜಗನ್ನಾಥ್ ಕುಲಾಲ್, ವಿಶಾಲ್ ಹಾಗೂ ಹರೀಶ್ ಇವರುಗಳು ವಿದ್ಯಾರ್ಥಿಗಳ ಜೊತೆ ನೇರ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.ಕಾರ್ಯಕ್ರಮವನ್ನ ಯತೀಶ್ ಸಿರಿಮಜಲು ಸ್ವಾಗತಿಸಿ, ಜಗನ್ನಾಥ್ ಕುಲಾಲ್ ವಂದಿಸಿದರು. ಉಪನ್ಯಾಸಕ ಸುಧೀರ್ ಕೆಎನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya

ಜಿ.ಎಂ. ಮಹಮ್ಮದ್ ಕುಂಞಿ ನಿಧನ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!