23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

ಉಜಿರೆ: ನಮ್ಮ ನಾಡಿನ ಪ್ರಸಿದ್ಧ ದೇವೀ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಆಶ್ವಯುಜ ಮಾಸದ ಹುಣ್ಣಿಮೆಯಂದು ಅ. 28 ರಂದು ಹೊರಟು ಸಾಯಂಕಾಲ ಮಂಗಳೂರಿನ ಕದ್ರಿ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸಿ ಅ.29 ಭಾನುವಾರ ಬೆಳಿಗ್ಗೆ ಕದ್ರಿಯಿಂದ ಹೊರಟ ಯಾತ್ರೆ ಮಧ್ಯಾಹ್ನ 1 ಗಂಟೆಗೆ ಉಜಿರೆಯ ಜನಾರ್ದನ ಸ್ವಾಮಿ ದೇವಾಲಯವನ್ನು ತಲುಪಿದಾಗ ಉಜಿರೆಯಲ್ಲಿ ರಥಯಾತ್ರೆಗೆ ಅದ್ದೂರಿ ಸ್ವಾಗತ ನೀಡಿ ರಥಕ್ಕೆ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಧರ್ಮ ಜಾಗೃತಿ‌ ಸಮಿತಿ ಸಂಚಾಲಕ ಶಶಿಧರ ಶೆಟ್ಟಿ ನವಶಕ್ತಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜ‌ನೆ ಡಾ.ಎಲ್ ಹೆಚ್.ಮಂಜುನಾಥ್, ಅನಿಲ್ ಕುಮಾರ್ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ಇಲ್ಲಿಂದ ಮಧ್ಯಾಹ್ನ 3 ಗಂಟೆಗೆ ಪಾದಯಾತ್ರೆಯ ಮೂಲಕ ಹೊರಟು ನಮ್ಮ ನಾಡಿನ ಪ್ರಸಿದ್ಧ ಶ್ರದ್ಧಾಕೇಂದ್ರವಾದ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಬಂದು ಪ್ರಾರ್ಥನೆಯೊಂದಿಗೆ ಧರ್ಮ ಸಂರಕ್ಷಣಯಾತ್ರೆ ಸಂಪನ್ನಗೊಳ್ಳಲಿದೆ.

Related posts

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!