23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

ಉಜಿರೆ: ನಮ್ಮ ನಾಡಿನ ಪ್ರಸಿದ್ಧ ದೇವೀ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಆಶ್ವಯುಜ ಮಾಸದ ಹುಣ್ಣಿಮೆಯಂದು ಅ. 28 ರಂದು ಹೊರಟು ಸಾಯಂಕಾಲ ಮಂಗಳೂರಿನ ಕದ್ರಿ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸಿ ಅ.29 ಭಾನುವಾರ ಬೆಳಿಗ್ಗೆ ಕದ್ರಿಯಿಂದ ಹೊರಟ ಯಾತ್ರೆ ಮಧ್ಯಾಹ್ನ 1 ಗಂಟೆಗೆ ಉಜಿರೆಯ ಜನಾರ್ದನ ಸ್ವಾಮಿ ದೇವಾಲಯವನ್ನು ತಲುಪಿದಾಗ ಉಜಿರೆಯಲ್ಲಿ ರಥಯಾತ್ರೆಗೆ ಅದ್ದೂರಿ ಸ್ವಾಗತ ನೀಡಿ ರಥಕ್ಕೆ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಧರ್ಮ ಜಾಗೃತಿ‌ ಸಮಿತಿ ಸಂಚಾಲಕ ಶಶಿಧರ ಶೆಟ್ಟಿ ನವಶಕ್ತಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜ‌ನೆ ಡಾ.ಎಲ್ ಹೆಚ್.ಮಂಜುನಾಥ್, ಅನಿಲ್ ಕುಮಾರ್ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ಇಲ್ಲಿಂದ ಮಧ್ಯಾಹ್ನ 3 ಗಂಟೆಗೆ ಪಾದಯಾತ್ರೆಯ ಮೂಲಕ ಹೊರಟು ನಮ್ಮ ನಾಡಿನ ಪ್ರಸಿದ್ಧ ಶ್ರದ್ಧಾಕೇಂದ್ರವಾದ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಬಂದು ಪ್ರಾರ್ಥನೆಯೊಂದಿಗೆ ಧರ್ಮ ಸಂರಕ್ಷಣಯಾತ್ರೆ ಸಂಪನ್ನಗೊಳ್ಳಲಿದೆ.

Related posts

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!