July 23, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ, ಕುಲಾಲ/ ಕುಂಬಾರರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇವರ ಸಹಯೋಗದೊಂದಿಗೆ ಕುಲಾಲ ಸಾಂತ್ವನ ನಿಧಿ ಸಮಿತಿ ವತಿಯಿಂದ ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ಉದ್ಘಾಟಿಸಿದರು.
ಬಳಿಕ ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನವನ್ನು ಜೂನಿಯರ್ ಕಾಲೇಜು ಬೆಳ್ತಂಗಡಿ ಉಪನ್ಯಾಸಕರಾದ ಗಣೇಶ್ ಭಟ್ ನೀಡಿದರು.

Chartered Accountant ಅಭಿನವ್ ಕುಲಾಲ್ ಇವರು CA ಕಂಪ್ಲೀಟ್ ಮಾಡುವುದು ಹೇಗೆ ಎನ್ನುವುದರ ಬಗ್ಗೆ ಮಾರ್ಗದರ್ಶನ ನೀಡಿದರು. ಉದ್ಯಮಿ ಲೋಕೇಶ್ ಕುಲಾಲ್ ಉದ್ಯಮದ ಬಗ್ಗೆ , ನಿವೃತ್ತ ಉಪತಾಶಿಲ್ದಾರ್ ಎಚ್. ಪದ್ಮ ಕುಮಾರ್ ಕಂದಾಯ ಇಲಾಖೆಯ ಬಗ್ಗೆ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಪಂಚಾಯತ್ ರಾಜ್ ಬಗ್ಗೆ ಮಾಹಿತಿ ನೀಡಿದರು. ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್, ಶಿಕ್ಷಕ ಶ್ರೀ ಜಗನ್ನಾಥ್ ಕುಲಾಲ್, ವಿಶಾಲ್ ಹಾಗೂ ಹರೀಶ್ ಇವರುಗಳು ವಿದ್ಯಾರ್ಥಿಗಳ ಜೊತೆ ನೇರ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.ಕಾರ್ಯಕ್ರಮವನ್ನ ಯತೀಶ್ ಸಿರಿಮಜಲು ಸ್ವಾಗತಿಸಿ, ಜಗನ್ನಾಥ್ ಕುಲಾಲ್ ವಂದಿಸಿದರು. ಉಪನ್ಯಾಸಕ ಸುಧೀರ್ ಕೆಎನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya
error: Content is protected !!