25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

ಬೆಳ್ತಂಗಡಿ: ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ, ಕುಲಾಲ/ ಕುಂಬಾರರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇವರ ಸಹಯೋಗದೊಂದಿಗೆ ಕುಲಾಲ ಸಾಂತ್ವನ ನಿಧಿ ಸಮಿತಿ ವತಿಯಿಂದ ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ಉದ್ಘಾಟಿಸಿದರು.
ಬಳಿಕ ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನವನ್ನು ಜೂನಿಯರ್ ಕಾಲೇಜು ಬೆಳ್ತಂಗಡಿ ಉಪನ್ಯಾಸಕರಾದ ಗಣೇಶ್ ಭಟ್ ನೀಡಿದರು.

Chartered Accountant ಅಭಿನವ್ ಕುಲಾಲ್ ಇವರು CA ಕಂಪ್ಲೀಟ್ ಮಾಡುವುದು ಹೇಗೆ ಎನ್ನುವುದರ ಬಗ್ಗೆ ಮಾರ್ಗದರ್ಶನ ನೀಡಿದರು. ಉದ್ಯಮಿ ಲೋಕೇಶ್ ಕುಲಾಲ್ ಉದ್ಯಮದ ಬಗ್ಗೆ , ನಿವೃತ್ತ ಉಪತಾಶಿಲ್ದಾರ್ ಎಚ್. ಪದ್ಮ ಕುಮಾರ್ ಕಂದಾಯ ಇಲಾಖೆಯ ಬಗ್ಗೆ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಪಂಚಾಯತ್ ರಾಜ್ ಬಗ್ಗೆ ಮಾಹಿತಿ ನೀಡಿದರು. ವಾಣಿಜ್ಯ ತೆರಿಗೆ ಅಧಿಕಾರಿ ಯತೀಶ್ ಸಿರಿಮಜಲ್, ಶಿಕ್ಷಕ ಶ್ರೀ ಜಗನ್ನಾಥ್ ಕುಲಾಲ್, ವಿಶಾಲ್ ಹಾಗೂ ಹರೀಶ್ ಇವರುಗಳು ವಿದ್ಯಾರ್ಥಿಗಳ ಜೊತೆ ನೇರ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.ಕಾರ್ಯಕ್ರಮವನ್ನ ಯತೀಶ್ ಸಿರಿಮಜಲು ಸ್ವಾಗತಿಸಿ, ಜಗನ್ನಾಥ್ ಕುಲಾಲ್ ವಂದಿಸಿದರು. ಉಪನ್ಯಾಸಕ ಸುಧೀರ್ ಕೆಎನ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
error: Content is protected !!