September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಇವರು 2023 ನೇ ಸಾಲಿನಲ್ಲಿ ಓದುವ ಹವ್ಯಾಸ ಬೆಳೆಸಲು ನಡೆಸಿದ ಲೈಬ್ರರಿ ಪುಸ್ತಕ ವಿತರಣೆ ಅಭಿಯಾನವು ವಲಯದ ಅತ್ಯುತ್ತಮ ಕಾರ್ಯಕ್ರಮ ವಿನ್ನರ್ ಪ್ರಶಸ್ತಿ ಗಳಿಸಿದೆ.

ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರು ಈ ವರ್ಷ ನಡೆಸಿದ ನೂತನ ವೈಬ್ ಸೈಟ್ ಸ್ಥಾಪನೆ , ಅಶಕ್ತರಿಗೆ ನೆರವು, ಸ್ಕಾಲರ್ ಶಿಪ್ ವಿತರಣೆ, ಯುವ ಜೇಸಿ ತರಬೇತಿ, ವಲಯ ಮಟ್ಟದ ಸಭೆಯ ಆತಿಥ್ಯ, ಸೆನೆಟರ್ , ಹೆಚ್ ಜಿ.ಎಫ್ , ಜೆ. ಎಫ್.ಯಂ. ಕೊಡುಗೆ, ಶೇಕಡಾ ನೂರರಷ್ಟು ಸದಸ್ಯರ ಹೆಚ್ಚಳ, ಅಧ್ಯಕ್ಷರ ವಾರ್ತಾ ಪತ್ರಗಳ ಎಲ್ಲಾ ಆವೃತ್ತಿಗಳ
ಪ್ರಕಟಣೆ, ಮೌನ ಸಾಧಕರ ಅಭಿನಂದನೆ ಮತ್ತು ನೆರವು, ಯಶಸ್ವೀ ಪ್ರವಾಸ, ಸ್ವಚ್ಛತಾ ಆಂದೋಲನ, ಗಿಡಗಳನ್ನು ನೆಡುವುದು ಸೇರಿದಂತೆ ನಡೆಸಿದ ನೂರಾರು ಕೆಲಸಗಳನ್ನು ಗುರುತಿಸಿ ಔಟ್ ಸ್ಟಾಡಿಂಗ್ ಲೋಕಲ್ ಗ್ಲೋಬಲ್ ಗೋಲ್ಸ್ ಪ್ರಾಜೆಕ್ಟ್ ಆಫ್ ದಿ ಜೋನ್ ವಿನ್ನರ್, ಔಟ್ ಸ್ಟಾಡಿಂಗ್ ಜೇಸಿಐ ಇಂಡಿಯಾ ಪೌಂಡೇಶನ್ ಮೆಂಬರ್ ಆಫ್ ದಿ ಜೋನ್ ವಿನ್ನರ್ ಪ್ರಶಸ್ತಿ ,ಹಾಗೂ ಘಟಕಾಧ್ಯಕ್ಷರಿಗೆ ಜೇಸಿ ಸೇವಾ ರತ್ನ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಪುತ್ತೂರು ಜೇಸಿಐ ಆತಿಥ್ಯದಲ್ಲಿ ಪುತ್ತೂರಿನ ಅಬ್ರಾಡ್ ಮಲ್ಟಿ ಫ್ಲೆಕ್ಸ್ ಆಡಿಟೋರಿಯನಲ್ಲಿ ಅ 28 ಹಾಗೂ 29 ರಂದು ಜರುಗಿದ ವರ್ಣ ರಂಜಿತ ವಲಯ ಸಮ್ಮೇಳನದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಆಡಳಿತ ಮಂಡಳಿ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಜಿತೇಶ್ ಎಲ್ ಪಿರೇರಾ ಅವರಿಗೆ ಪುರಸ್ಕಾರ ವಿತರಿಸಿ ಗೌರವಿಸಿದರು.

Related posts

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya

ರೇಣುಕಾ ಪ್ರಸಾದ್ ರವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗೌರವಾರ್ಪಣೆ

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ಅರುಣ್ ಸಾಲಿಯಾನ್ ನಿಧನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
error: Content is protected !!