September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ, ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣಿಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಮ೯ಸ್ಥಳ ನಿವಾಸಿ ಸಂದೀಪ್ ರೈ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.


ಧರ್ಮಸ್ಥಳ ಗ್ರಾಮದ ನಿವಾಸಿ ಸಂದೀಪ್ ರೈ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿ, ಅ.29ರಂದು‌ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ,ಸದ್ರಿ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿ, ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ, ದ್ವೇಷ ,ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ಧತೆಯನ್ನು ಸೃಷ್ಟಿಸಿರುವುದಾಗಿ, ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ ವಿ ಗೌಡ, ಮನೋಹರ್ ಮನ್ನಡ್ಕ, ಮನೋಜ್ ಸಾಲ್ಯಾನ್ ಕುಂಜರ್ಪ, ಮತ್ತು ಇತರರ ವಿರುದ್ದ ಹಾಗೂ ಸಮಾಜದ ಸ್ವಾಸ್ತ್ಯವನ್ನು ಕದಡುವಂತಹ ಕೆಟ್ಟದಾಗಿ ಶಬ್ದಗಳನ್ನು ಬರೆದ ಬ್ಯಾನರ್ ಅಳವಡಿಸುವರೇ ಅನುಮತಿ ನೀಡಿದ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಹಾಗೂ ಕಾರ್ಯದರ್ಶೀಗಳ ವಿರುದ್ದ
ದೂರು ನೀಡಿದ್ದರು.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 106 /2023 ಕಲಂ; 120(B)153(A) 153(B) IPC ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya

‘ಪ್ರೇರಣಾ – 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜು ಚಾಂಪಿಯನ್ಸ್

Suddi Udaya
error: Content is protected !!