September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ, ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣಿಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಮ೯ಸ್ಥಳ ನಿವಾಸಿ ಸಂದೀಪ್ ರೈ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.


ಧರ್ಮಸ್ಥಳ ಗ್ರಾಮದ ನಿವಾಸಿ ಸಂದೀಪ್ ರೈ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿ, ಅ.29ರಂದು‌ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ,ಸದ್ರಿ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿ, ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ, ದ್ವೇಷ ,ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ಧತೆಯನ್ನು ಸೃಷ್ಟಿಸಿರುವುದಾಗಿ, ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ ವಿ ಗೌಡ, ಮನೋಹರ್ ಮನ್ನಡ್ಕ, ಮನೋಜ್ ಸಾಲ್ಯಾನ್ ಕುಂಜರ್ಪ, ಮತ್ತು ಇತರರ ವಿರುದ್ದ ಹಾಗೂ ಸಮಾಜದ ಸ್ವಾಸ್ತ್ಯವನ್ನು ಕದಡುವಂತಹ ಕೆಟ್ಟದಾಗಿ ಶಬ್ದಗಳನ್ನು ಬರೆದ ಬ್ಯಾನರ್ ಅಳವಡಿಸುವರೇ ಅನುಮತಿ ನೀಡಿದ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಹಾಗೂ ಕಾರ್ಯದರ್ಶೀಗಳ ವಿರುದ್ದ
ದೂರು ನೀಡಿದ್ದರು.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 106 /2023 ಕಲಂ; 120(B)153(A) 153(B) IPC ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya
error: Content is protected !!