23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

ಬೆಳ್ತಂಗಡಿ: ಶಿರಸಿಯ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ( ರಿ ) , ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಇವರ ಆಶ್ರಯದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು ನ. 18 ರ ಶನಿವಾರ ಮಧ್ಯಾಹ್ನ 2 ಘಂಟೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.


ತಾಲೂಕು ಮಟ್ಟದ ಆಯಾ ಸ್ಪರ್ಧೆಯಲ್ಲಿ ವಿಜೇತರಾದ ಇಬ್ಬರನ್ನು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ. ಡಿಸೆಂಬರ್ 2 ರಂದು ಜಿಲ್ಲಾ ಮಟ್ಟದ ಸ್ಪರ್ಧೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಲಿದೆ. ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಕಂಠಪಾಠಕ್ಕೆ ಶ್ರೀ ಭಗವದ್ಗೀತೆಯ 10 ನೆಯ ಅಧ್ಯಾಯ ಪೂರ್ತಿ ಶ್ಲೋಕಗಳನ್ನು ಹೇಳಲು ಇರುತ್ತದೆ.

ಬೆಳ್ತಂಗಡಿ ತಾಲೂಕು ಮಟ್ಟದ ಸ್ಪರ್ಧೆಗಳ ವಿವರ : 5 ನೇಯ ತರಗತಿಯಿಂದ 7 ನೇಯ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಕಂಠಪಾಠ ಸ್ಪರ್ಧೆ ಗೆ 10 ನೆಯ ಅಧ್ಯಾಯದ ಮೊದಲ 20 ಶ್ಲೋಕಗಳು ಇರುತ್ತವೆ ಹಾಗೂ ‘ಭಗವದ್ಗೀತೆಯಿಂದ ಜೀವನ ಸಮೃದ್ಧಿ’ ವಿಷಯದಲ್ಲಿ 5 ನಿಮಿಷ ಅವಧಿಯ ಭಾಷಣ ಸ್ಪರ್ಧೆ ನಡೆಯುತ್ತದೆ.

8 ರಿಂದ 10 ನೆಯ ತರಗತಿ ವಿದ್ಯಾರ್ಥಿಗಳಿಗೆ ಕಂಠಪಾಠ ಸ್ಪರ್ಧೆಗೆ 10 ನೆಯ ಅಧ್ಯಾಯದ ಮೊದಲ 20 ಶ್ಲೋಕಗಳು ಹಾಗೂ ‘ ಭಗವದ್ಗೀತೆಯಿಂದ ಭಾರತಕ್ಕೆ ವಿಶ್ವಮಾನ್ಯತೆ ‘ ವಿಷಯದಲ್ಲಿ 5 ನಿಮಿಷ ಅವಧಿಯ ಭಾಷಣ ಸ್ಪರ್ಧೆ ನಡೆಯುತ್ತದೆ. ಹಾಗೆಯೇ ಲಿಖಿತ ರಸಪ್ರಶ್ನಾ ಸ್ಪರ್ಧೆ ನಡೆಯಲಿದ್ದು , 20 ನಿಮಿಷಗಳಲ್ಲಿ 30 ಸರಳ ಪ್ರಶ್ನೆಗಳಿಗೆ ಉತ್ತರಿಸಬೇಕು.

ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಂಠಪಾಠ ಸ್ಪರ್ಧೆಗೆ 10 ನೆಯ ಅಧ್ಯಾಯದ ಮೊದಲ 20 ಶ್ಲೋಕಗಳು ನಿಗದಿಯಾಗಿವೆ ಹಾಗೂ ‘ ಪ್ರಜಾಪ್ರಭುತ್ವ ಸಂಪೂರ್ಣ ಸಾಕಾರಗೊಳ್ಳಲು ಪ್ರತಿಯೊಬ್ಬನಿಗೂ ಭಗವದ್ಗೀತೆ ‘
ಎಂಬ ವಿಷಯದಲ್ಲಿ 5 ನಿಮಿಷಗಳ ಅವಧಿಯ ಭಾಷಣ ಸ್ಪರ್ಧೆ ನಡೆಯಲಿದೆ.

ಶಾಲಾ / ಕಾಲೇಜು ಮಟ್ಟದ ಸ್ಪರ್ಧೆಯನ್ನು ಮಾಡಿಸಿ ತಾಲೂಕು ಮಟ್ಟದ ಸ್ಪರ್ಧೆಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರ ಹೆಸರನ್ನು ಸ್ಪರ್ಧಾ ಸಂಯೋಜಕರಿಗೆ ನವೆಂಬರ್ 15 ರ ಒಳಗೆ ಕೊಡಬೇಕು.

ಹೆಚ್ಚಿನ ವಿವರಗಳಿಗೆ ಬೆಳ್ತಂಗಡಿ ತಾಲೂಕು ಶ್ರೀ ಭಗವದ್ಗೀತಾ ಅಭಿಯಾನದ ಸಂಯೋಜಕರಾದ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ
ಡಾ.ಪ್ರಸನ್ನಕುಮಾರ ಐತಾಳ್ 9964139855 ಇವರನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ದಶಸಂಭ್ರಮದ ಪ್ರಯುಕ್ತ ಬಿಲ್ಲವ ಸಮಾಜ ಬಾಂಧವರಿಗಾಗಿ:8 ತಂಡಗಳ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ,ಹಲವು ತಂಡಗಳು ಭಾಗಿ: ಮಾನವೀಯ ಸೇವೆಯ ಯುವವಾಹಿನಿಗೆ ರಾಜಕೀಯ ನಂಟು ಬೇಡ: ಬಿನುತಾ ಬಂಗೇರ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya
error: Content is protected !!