22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

ಬೆಳ್ತಂಗಡಿ: ಶಿರಸಿಯ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ( ರಿ ) , ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಇವರ ಆಶ್ರಯದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು ನ. 18 ರ ಶನಿವಾರ ಮಧ್ಯಾಹ್ನ 2 ಘಂಟೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.


ತಾಲೂಕು ಮಟ್ಟದ ಆಯಾ ಸ್ಪರ್ಧೆಯಲ್ಲಿ ವಿಜೇತರಾದ ಇಬ್ಬರನ್ನು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ. ಡಿಸೆಂಬರ್ 2 ರಂದು ಜಿಲ್ಲಾ ಮಟ್ಟದ ಸ್ಪರ್ಧೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಲಿದೆ. ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಕಂಠಪಾಠಕ್ಕೆ ಶ್ರೀ ಭಗವದ್ಗೀತೆಯ 10 ನೆಯ ಅಧ್ಯಾಯ ಪೂರ್ತಿ ಶ್ಲೋಕಗಳನ್ನು ಹೇಳಲು ಇರುತ್ತದೆ.

ಬೆಳ್ತಂಗಡಿ ತಾಲೂಕು ಮಟ್ಟದ ಸ್ಪರ್ಧೆಗಳ ವಿವರ : 5 ನೇಯ ತರಗತಿಯಿಂದ 7 ನೇಯ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಕಂಠಪಾಠ ಸ್ಪರ್ಧೆ ಗೆ 10 ನೆಯ ಅಧ್ಯಾಯದ ಮೊದಲ 20 ಶ್ಲೋಕಗಳು ಇರುತ್ತವೆ ಹಾಗೂ ‘ಭಗವದ್ಗೀತೆಯಿಂದ ಜೀವನ ಸಮೃದ್ಧಿ’ ವಿಷಯದಲ್ಲಿ 5 ನಿಮಿಷ ಅವಧಿಯ ಭಾಷಣ ಸ್ಪರ್ಧೆ ನಡೆಯುತ್ತದೆ.

8 ರಿಂದ 10 ನೆಯ ತರಗತಿ ವಿದ್ಯಾರ್ಥಿಗಳಿಗೆ ಕಂಠಪಾಠ ಸ್ಪರ್ಧೆಗೆ 10 ನೆಯ ಅಧ್ಯಾಯದ ಮೊದಲ 20 ಶ್ಲೋಕಗಳು ಹಾಗೂ ‘ ಭಗವದ್ಗೀತೆಯಿಂದ ಭಾರತಕ್ಕೆ ವಿಶ್ವಮಾನ್ಯತೆ ‘ ವಿಷಯದಲ್ಲಿ 5 ನಿಮಿಷ ಅವಧಿಯ ಭಾಷಣ ಸ್ಪರ್ಧೆ ನಡೆಯುತ್ತದೆ. ಹಾಗೆಯೇ ಲಿಖಿತ ರಸಪ್ರಶ್ನಾ ಸ್ಪರ್ಧೆ ನಡೆಯಲಿದ್ದು , 20 ನಿಮಿಷಗಳಲ್ಲಿ 30 ಸರಳ ಪ್ರಶ್ನೆಗಳಿಗೆ ಉತ್ತರಿಸಬೇಕು.

ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಂಠಪಾಠ ಸ್ಪರ್ಧೆಗೆ 10 ನೆಯ ಅಧ್ಯಾಯದ ಮೊದಲ 20 ಶ್ಲೋಕಗಳು ನಿಗದಿಯಾಗಿವೆ ಹಾಗೂ ‘ ಪ್ರಜಾಪ್ರಭುತ್ವ ಸಂಪೂರ್ಣ ಸಾಕಾರಗೊಳ್ಳಲು ಪ್ರತಿಯೊಬ್ಬನಿಗೂ ಭಗವದ್ಗೀತೆ ‘
ಎಂಬ ವಿಷಯದಲ್ಲಿ 5 ನಿಮಿಷಗಳ ಅವಧಿಯ ಭಾಷಣ ಸ್ಪರ್ಧೆ ನಡೆಯಲಿದೆ.

ಶಾಲಾ / ಕಾಲೇಜು ಮಟ್ಟದ ಸ್ಪರ್ಧೆಯನ್ನು ಮಾಡಿಸಿ ತಾಲೂಕು ಮಟ್ಟದ ಸ್ಪರ್ಧೆಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರ ಹೆಸರನ್ನು ಸ್ಪರ್ಧಾ ಸಂಯೋಜಕರಿಗೆ ನವೆಂಬರ್ 15 ರ ಒಳಗೆ ಕೊಡಬೇಕು.

ಹೆಚ್ಚಿನ ವಿವರಗಳಿಗೆ ಬೆಳ್ತಂಗಡಿ ತಾಲೂಕು ಶ್ರೀ ಭಗವದ್ಗೀತಾ ಅಭಿಯಾನದ ಸಂಯೋಜಕರಾದ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ
ಡಾ.ಪ್ರಸನ್ನಕುಮಾರ ಐತಾಳ್ 9964139855 ಇವರನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya
error: Content is protected !!