22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

ಮೃತ ಜಗದೀಶ್

ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ.

ಆರೋಪಿ ಕೃಷ್ಣಯ್ಯ ಆಚಾರ್

ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75ವ) ಅವರ ಪುತ್ರ ಜಗದೀಶ್(30ವ) ಎಂಬವರು ಈ ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಇವರ ತಂದೆ ಕೃಷ್ಣಯ್ಯಾಚಾರ್ ಚೂರಿಯಿಂದ ಇರಿದು ಮಗನನ್ನು ಕೊಲೆಗೈದ ಆರೋಪಿಯಾಗಿದ್ದಾರೆ.


ರಾತ್ರಿಯ ವೇಳೆ ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ತಂದೆ ಹಾಗೂ ಮಗನ ನಡುವೆ ಮಾತಿನ ಜಗಳ ನಡೆದಿದೆ. ಇದು ವಿಕೋಪಕ್ಕೆ ತಿರುಗಿದಾಗ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕೃಷ್ಣಯ್ಯ ಆಚಾರ್ ಅಲ್ಲೇ ಕಪಾಟಿನಲ್ಲಿದ್ದ ಚೂರಿಯನ್ನು ತೆಗೆದು ಹೊರಬಂದು ಜಗದೀಶನಿಗೆ ಎಡ ಭುಜಕ್ಕೆ ಹಾಗೂ ಎಡ ಎದೆ ಭಾಗಕ್ಕೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಮೃತಪಟ್ಟಿದ್ದಾರೆನ್ನಲಾಗಿದೆ. ಈ ಬಗ್ಗೆ ಜಗದೀಶನ ಅಣ್ಣ ಗಣೇಶ್ ನೀಡಿರುವ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ ನಂ ೧೦೭/೨೦೨೩ ಕಲಂ;೩೦೨ ಐಪಿಸಿ ಪ್ರಕರಣ ದಾಖಲಿಸಲಾಗಿದೆ

Related posts

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಪುತ್ತೂರು ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya
error: Content is protected !!