23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

ಮೃತ ಜಗದೀಶ್

ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ.

ಆರೋಪಿ ಕೃಷ್ಣಯ್ಯ ಆಚಾರ್

ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75ವ) ಅವರ ಪುತ್ರ ಜಗದೀಶ್(30ವ) ಎಂಬವರು ಈ ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಇವರ ತಂದೆ ಕೃಷ್ಣಯ್ಯಾಚಾರ್ ಚೂರಿಯಿಂದ ಇರಿದು ಮಗನನ್ನು ಕೊಲೆಗೈದ ಆರೋಪಿಯಾಗಿದ್ದಾರೆ.


ರಾತ್ರಿಯ ವೇಳೆ ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ತಂದೆ ಹಾಗೂ ಮಗನ ನಡುವೆ ಮಾತಿನ ಜಗಳ ನಡೆದಿದೆ. ಇದು ವಿಕೋಪಕ್ಕೆ ತಿರುಗಿದಾಗ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕೃಷ್ಣಯ್ಯ ಆಚಾರ್ ಅಲ್ಲೇ ಕಪಾಟಿನಲ್ಲಿದ್ದ ಚೂರಿಯನ್ನು ತೆಗೆದು ಹೊರಬಂದು ಜಗದೀಶನಿಗೆ ಎಡ ಭುಜಕ್ಕೆ ಹಾಗೂ ಎಡ ಎದೆ ಭಾಗಕ್ಕೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಮೃತಪಟ್ಟಿದ್ದಾರೆನ್ನಲಾಗಿದೆ. ಈ ಬಗ್ಗೆ ಜಗದೀಶನ ಅಣ್ಣ ಗಣೇಶ್ ನೀಡಿರುವ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ ನಂ ೧೦೭/೨೦೨೩ ಕಲಂ;೩೦೨ ಐಪಿಸಿ ಪ್ರಕರಣ ದಾಖಲಿಸಲಾಗಿದೆ

Related posts

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ನಿವೃತ್ತಿ ಹೊಂದಿದ ಪಂಪು ಚಾಲಕ ಕೊರಗಪ್ಪರಿಗೆ ಬೀಳ್ಕೊಡುಗೆ

Suddi Udaya

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!