September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ಒಕ್ಕಲೆಬ್ಬಿಸಬಾರದು ಎಂಬ ಆದೇಶವಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ತಿಳಿಸಿದರು.

ಅವರು ಅ.30ರಂದು ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಪಾರಂಪಾರಿಕ ಅರಣ್ಯವಾಸಿಗಳು ಹಲವಾರು ತಲೆಮಾರುಗಳಿಂದ ಈ ಪ್ರದೇಶದಲ್ಲಿ ವಾಸಿಸುವಂತಹ ಎಲ್ಲರ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ನೀಡುವ ದೃಷ್ಟಿಯಲ್ಲಿ ಎಲ್ಲ ಒತ್ತುವರಿಗಳ ಬಗ್ಗೆ ಸರಕಾರ ಪುನರ್ ಪರಿಶೀಲನೆ ಮಾಡಬೇಕೆಂದು ತಿಳಿಸಿದರು.

ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವ ಸಂಬಂಧ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ (ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ) ಅಧಿನಿಯಮ 2006 ರ ಮತ್ತು ನಿಯಮಗಳು 2008 ರ ಕಲಂ 5 ರನ್ವಯ ಯಾರೇ ಅರಣ್ಯವಾಸಿ ಅನುಸೂಚಿತ ಬುಡಕಟ್ಟಿನ ವ್ಯಕ್ತಿಯು ಅಥವಾ ಇತರೆ ಪಾರಂಪರಿಕ ಅರಣ್ಯ ವಾಸಿಗಳು ಅರ್ಜಿ ಹಾಕಿದಲ್ಲಿ ಪರಿಶೀಲನಾ ಪೂರ್ಣವಾಗುವವರೆಗೆ ಅಧಿಯೋಗದಲ್ಲಿರುವ ಅರಣ್ಯ ಜಮೀನಿನಿಂದ ಅವರನ್ನು ಒಕ್ಕಲೆಬ್ಬಿಸಬಾರದು ಹಾಗೂ ಮೂರು ಎಕರೆಗಿಂತ ಕಡಿಮೆ ಇರುವ (ಒತ್ತುವರಿ ಭೂಮಿ ಮತ್ತು ಆತನ ಪಟ್ಟಾ ಭೂಮಿ ಸೇರಿ) ಅರ್ಹ ಪ್ರಕರಣಗಳನ್ನು ಅರಣ್ಯ (ಸಂರಕ್ಷಣಾ) ಕಾಯ್ದೆ 1980 ರಡಿಯಲ್ಲಿ ಭಾರತ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು ಎಂದು ಸರಕಾರವು ಆದೇಶಿಸಿದೆ ಎಂದು ತಿಳಿಸಿದರು.

ಒಂದು ವೇಳೆ ಅರಣ್ಯ ಭೂಮಿಯಲ್ಲಿ ಇದ್ದರೆ ಅಂತಹ ಒತ್ತುವಾರಿದಾರರಿಗೆ ಪುನರ್ ವಸತಿ ಮತ್ತು ಪುನರ್ ವ್ಯವಸ್ಥೆಗಳ ಪ್ಯಾಕೇಜ್ ಕಲ್ಪಿಸುವ ಬಗ್ಗೆ ಸರಕಾರದ ಹಂತದಲ್ಲಿ ಪರಿಶೀಲಿಸಲಾಗುವುದು.

ಪಾರಂಪಾರಿಕವಾಗಿ ತಲೆಮಾರುಗಳಿಂದ ಈ ಪ್ರದೇಶದಲ್ಲಿ ವಾಸಿಸುವಂತಹ ವ್ಯಕ್ತಿಗಳಿಗೆ ಹಕ್ಕುಪತ್ರ ಕೊಡುವ ದೃಷ್ಟಿಯಲ್ಲಿ ಅವರಿಗೆ ಶಾಶ್ವತವಾದಂತಹ ಪರಿಹಾರ ಕೊಡುವ ದೃಷ್ಟಿಯಲ್ಲಿ ಸರಕಾರ ಕ್ರಮವಹಿಸಬೇಕು ಎಂದು ಭಾರತೀಯ ಜನತಾ ಪಾರ್ಟಿ ಸರ್ಕಾರವನ್ನು
ಒತ್ತಾಯಿಸುತ್ತದೆ ಎಂದು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಸ್ವಾಗತಿಸಿದರು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
error: Content is protected !!