March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮೊಬೈಲ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಅ.30ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ ರವರು ವಹಿಸಿದ್ದರು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೋಹಿಣಿ ರವರು ಸಮುದಾಯದತ್ತ ಶಾಲಾ ಕಾರ್ಯಕ್ರಮದ ಮಹತ್ವ ಮತ್ತು ಉದ್ದೇಶಗಳ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಣ ತಜ್ಞರು ಪೋಷಕರೂ ಆದ ಡಾ. ಪ್ರದೀಪ್ ರವರು ಮೊಬೈಲ್ ಬಳಕೆಯ ಸಾಧಕ ಬಾಧಕಗಳನ್ನು ವಿವರಿಸುತ್ತಾ ಮೊಬೈಲಿನಿಂದ ಹೊರಡುವ ವಿಕಿರಣಗಳು ಮಕ್ಕಳ ಆರೋಗ್ಯದ ಮೇಲೆ ಗಂಭೀರ ಸಮಸ್ಯೆಗಳನ್ನು ಉಂಟು ಮಾಡುತ್ತಿದ್ದು ಪೋಷಕರು ಮಕ್ಕಳು ಮೊಬೈಲ್ ಬಳಸದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು .

ನಂತರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳು ಪೋಷಕರಾದ ಯೋಗಿಶ್ ರವರು ಮಾತನಾಡಿ ಸರಕಾರಿ ಶಾಲೆಯ ಅಭಿವೃದ್ಧಿಯಲ್ಲಿ ಪೋಷಕರಾದ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು . ಸಹ ಶಿಕ್ಷಕಿ ಶ್ರೀಮತಿ ಶ್ರೀಲತಾ ಸಿ ಎಚ್ ರವರು SEAS ಪರೀಕ್ಷೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ನೋಡಲ್ ಅಧಿಕಾರಿ ನಾವೂರು ಪ್ರೌಢಶಾಲಾ ಹಿಂದಿ ಶಿಕ್ಷಕಿ ಶ್ರೀಮತಿ ಮೀನಾ ರವರು ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ನಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಮಮತಾ, ಸದಸ್ಯರುಗಳಾದ ಹರೀಶ್ ಸಾಲಿಯಾನ್, ಗಣೇಶ್ ಗೌಡ, ಶ್ರೀಹಸೈನಾರ್, ಎಸ್ ಡಿ ಎಂ ಸಿ ಸದಸ್ಯರುಗಳು ,ಪೋಷಕರು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಶ್ರೀಮತಿ ಶೋಭಾ ಪಿ ಡಿ ರವರು ಧನ್ಯವಾದ ನೀಡಿದರು. ಶಿಕ್ಷಕಿ ಶ್ರೀಮತಿ ಶುಭ ಎಂ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya
error: Content is protected !!