25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

ಬೆಳ್ತಂಗಡಿ: ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಚಾಟಿಂಗ್ ಮೂಲಕ ವಿಶ್ವಾಸ ಗಳಿಸಿ, ಯುವಕನೋರ್ವನಿಂದ ರೂ.6.96 ಲಕ್ಷ ಪಡೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ ಪ್ರಕರಣ ವರದಿಯಾಗಿದೆ.


ಬರಾಯ ಕನ್ಯಾಡಿ ಗ್ರಾಮದ ಗುರಿಪಳ್ಳ ಎನೀರುಪಲ್ಕೆ ನಿವಾಸಿ, ಸತೀಶ್ ಗೌಡ ಎಂಬವರು ವಂಚನೆಗೆ ಒಳಗಾದ ಯುವಕರಾಗಿದ್ದಾರೆ. ಸತೀಶ್ ಗೌಡ ಅವರು ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ಫೇಸ್‌ಬುಕ್ ಮೂಲಕ ಮಹಿಳೆಯೋರ್ವರ ಪರಿಚಯವಾಗಿತ್ತು. ಈ ಮಹಿಳೆ ಚಾಟಿಂಗ್ ಮೂಲಕ ಸತೀಶ್ ಗೌಡರವರ ವಿಶ್ವಾಸವನ್ನು ಗಳಿಸಿ, ವಿವಿಧ ಕಾರಣಗಳನ್ನು ನೀಡಿ, ಬೇರೆ, ಬೇರೆ ಖಾತೆಗಳಿಗೆ ಒಟ್ಟು ರೂ.6,96,500 ಹಣವನ್ನು ಪಡೆದು ವಂಚಿಸಿರುವುದಾಗಿ ಸತೀಶ್ ಗೌಡ ಅವರು ನೀಡಿದ ದೂರಿನಂತೆ ದ.ಕ.ಜಿಲ್ಲಾ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅ.ಕ್ರ.33/2023 ಕಲಂ : 66(ಅ) 66 (ಆ)ಯಂತೆ ಪ್ರಕರಣ ದಾಖಲಾಗಿದೆ.

Related posts

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಗುರುವಾಯನಕೆರೆಯ ಕಂದಡಿಗುಡ್ಡೆ ನಿವಾಸಿ ಶ್ರೀಮತಿ ಲೀಲಾವತಿ ನಿಧನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!