30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

ಬೆಳ್ತಂಗಡಿ ತಾಲೂಕಿನ ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ. 46ಜನ ಡಿ ದರ್ಜೆ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ವತಿಯಿಂದ ಸಮವಸ್ತ್ರಗಳನ್ನು ಉಚಿತವಾಗಿ ಅ.30 ರಂದು ನೀಡಲಾಯಿತು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ನಿವೃತ್ತಿಯಾಗುತ್ತಿರುವ ಶ್ರೀಮತಿ ಕಮಲ ಹಾಗೂ ವರ್ಗಾವಣೆಯಾದ ಶ್ರೀಮತಿ ಬಿ ರಶ್ಮಿ ಅವರನ್ನು ಗೌರವಿಸಲಾಯಿತು.

ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಬೆಂಗಳೂರು ಇದರ ಜಂಟಿ ಕಾರ್ಯದರ್ಶಿ ಜಯಕೀರ್ತಿ ಜೈನ್, ಸಮುದಾಯ ಆರೋಗ್ಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ/ಚಂದ್ರಕಾಂತ್, ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಹೂಗಾರ್, ನಿರ್ದೇಶಕರಾದ ಚಂದ್ರಶೇಖರ್, ಅಬ್ದುಲ್ ರಝಕ್, ಸಲಹೆಗಾರರಾದ ವಸಂತ ಸುವರ್ಣ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲ ಜ್ಯೋತಿರಾಜ್, ಸಹಕಾರಿ ಸಂಘದ ನಿರ್ದೇಶಕರು, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya
error: Content is protected !!