September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಮಿಜಾರುಗುತ್ತು ಶ್ರೀ ಆನಂದ ಆಳ್ವರ ನಿಧನದಿಂದ ದುಃಖವಾಗಿದೆ. ಅವರ ಸರಳ ಹಾಗೂ ಆದರ್ಶ ವ್ಯಕ್ತಿತ್ವ ನಮ್ಮ ಜಿಲ್ಲೆಯಲ್ಲಿ ಸದಾ ಸ್ಮರಣೀಯವಾಗಿದೆ.
ಪ್ರಗತಿಪರ ಕೃಷಿಕರಾಗಿ ಅವರು ಕೃಷಿ ರಂಗದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಗೋವುಗಳ ಬಗ್ಗೆ ಅವರಿಗೆ ವಿಶೇಷ ಪ್ರೀತಿ, ಕಾಳಜಿ ಇತ್ತು. ಧರ್ಮಸ್ಥಳಕ್ಕೆ ಬಂದಾಗಲೆಲ್ಲ ಅವರು ಇಲ್ಲಿರುವ ಗೋ ಶಾಲೆಗೆ ಹೋಗಿ ಗೋವುಗಳ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸುತ್ತಿದ್ದರು.

1970ರ ದಶಕದಲ್ಲಿ ಅನೇಕ ಉದ್ಯಮಗಳನ್ನು ಅವರು ಪ್ರಾರಂಭಿಸಿ ಯುವ ಜನತೆಯನ್ನು ಪ್ರೋತ್ಸಾಹಿಸಿದರು.
ತಮ್ಮ ಎಲ್ಲಾ ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಶಿಸ್ತುಬದ್ಧವಾಗಿ, ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪಿಸಿದ್ದಾರೆ. ಶಿಕ್ಷಣ ರಂಗದಲ್ಲಿ ಅವರ ಮಗ ಡಾ. ಮೋಹನ ಆಳ್ವರ ಸೇವೆ-ಸಾಧನೆ ಶ್ಲಾಘನೀಯವಾಗಿದೆ.

ಆನಂದ ಆಳ್ವರ ನಿಧನದಿಂದ ನನಗೆ ಅತೀವ ದುಃಖವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದರು.

Related posts

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಅನ್ನದಾನ ಹಾಗೂ ದಾನಿಗಳಿಂದ ಸಿಹಿ ತಿಂಡಿ ಮತ್ತು ಪಾನೀಯ, ಮೊಟ್ಟೆ ವಿತರಣೆ

Suddi Udaya

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

Suddi Udaya
error: Content is protected !!