July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಮಿಜಾರುಗುತ್ತು ಶ್ರೀ ಆನಂದ ಆಳ್ವರ ನಿಧನದಿಂದ ದುಃಖವಾಗಿದೆ. ಅವರ ಸರಳ ಹಾಗೂ ಆದರ್ಶ ವ್ಯಕ್ತಿತ್ವ ನಮ್ಮ ಜಿಲ್ಲೆಯಲ್ಲಿ ಸದಾ ಸ್ಮರಣೀಯವಾಗಿದೆ.
ಪ್ರಗತಿಪರ ಕೃಷಿಕರಾಗಿ ಅವರು ಕೃಷಿ ರಂಗದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಗೋವುಗಳ ಬಗ್ಗೆ ಅವರಿಗೆ ವಿಶೇಷ ಪ್ರೀತಿ, ಕಾಳಜಿ ಇತ್ತು. ಧರ್ಮಸ್ಥಳಕ್ಕೆ ಬಂದಾಗಲೆಲ್ಲ ಅವರು ಇಲ್ಲಿರುವ ಗೋ ಶಾಲೆಗೆ ಹೋಗಿ ಗೋವುಗಳ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸುತ್ತಿದ್ದರು.

1970ರ ದಶಕದಲ್ಲಿ ಅನೇಕ ಉದ್ಯಮಗಳನ್ನು ಅವರು ಪ್ರಾರಂಭಿಸಿ ಯುವ ಜನತೆಯನ್ನು ಪ್ರೋತ್ಸಾಹಿಸಿದರು.
ತಮ್ಮ ಎಲ್ಲಾ ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಶಿಸ್ತುಬದ್ಧವಾಗಿ, ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪಿಸಿದ್ದಾರೆ. ಶಿಕ್ಷಣ ರಂಗದಲ್ಲಿ ಅವರ ಮಗ ಡಾ. ಮೋಹನ ಆಳ್ವರ ಸೇವೆ-ಸಾಧನೆ ಶ್ಲಾಘನೀಯವಾಗಿದೆ.

ಆನಂದ ಆಳ್ವರ ನಿಧನದಿಂದ ನನಗೆ ಅತೀವ ದುಃಖವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದರು.

Related posts

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಇದರ 8 ನೇ ವಾರ್ಷಿಕ ಹಾಗೂ 3 ನೇ ಸನದುದಾನ ಮಹಾ ಸಮ್ಮೇಳನ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು: ವ್ಯುತ್ಪತ್ತಿ ಸಂಘದ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya
error: Content is protected !!