July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದ್ದು ಕ್ಷೇತ್ರದ ಭಕ್ತ ವರ್ಗ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಶಾಸಕ ಹರೀಶ್ ಪೂಂಜರವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಕ್ಷೇತ್ರದ ಬಗ್ಗೆ ತಿಳಿಸಿದರು‌. ಬ್ರಹ್ಮಕಲಶೋತ್ಸವವು ಬರುವ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು ಸಮಿತಿ ಗೌರವಾಧ್ಯಕ್ಷ ಹರೀಶ್ ಪೂಂಜರವರಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಂಪೂರ್ಣ ಸಹಕಾರವನ್ನು ಯಾಚಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಹಾಗೂ ಊರವರ ವತಿಯಿಂದ ಶಾಸಕರಿಗೆ ಗೌರವ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಆನಂದ ಸಾಲಿಯಾನ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಎಂ ಪಾರೆಂಕಿ,ಆರ್ಚಕರಾದ ಸೂರ್ಯನಾರಾಯಣ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಕುಶಾಲಪ್ಪ ಗೌಡ ಪೊಸಲಾಯಿ, ಸುಧೀರ್ ಆರ್ ಸುವರ್ಣ,ನಾರಾಯಣ ಗೌಡ, ವಿಶ್ವನಾಥ್,ಸಂಜೀವ ನಾಯ್ಕ್, ಚಿದಾನಂದ,ವಂಸತ ,ಸತೀಶ್, ಜಗನ್ನಾಥ, ಸತೀಶ್, ವಿಶ್ವನಾಥ್, ಜಯಂತಿ, ವೇದಾವತಿ,ಬಾಲಕೃಷ್ಣ,ಕೃಷ್ಣಪ್ಪ ಪಿದಾರ ಶೀನಪ್ಪ, ಸೋಮನಾಥ ಇವರುಗಳು ಉಪಸ್ಥಿತರಿದ್ದರು.

Related posts

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!