July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಶಿಶಿಲ : ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟ ಶಿಶಿಲದ ಮಹಾಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅ.31ರಂದು ನಡೆಯಿತು.

ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ, ವಲಯ ಮೇಲ್ವಿಚಾರಕರಾದ ಜಯಾನಂದ್ , ವೀಣಾಶ್ರೀ, ಪಂಚಾಯತ್ ಅಧ್ಯಕ್ಷರು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಉಪಾಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ದೀಪ ಬೆಳಗಿಸುವುದರ ಮೂಲಕ ಮಹಾಸಭೆಯನ್ನು ಪ್ರಾರಂಭಿಸಲಾಯಿತು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಎನ್.ಆರ್.ಎಲ್.ಎಮ್ ಯೋಜನೆಯ ಉದ್ದೇಶ ಮತ್ತು ವಿವಿಧ ಜೀವನೋಪಾಯ ಚಟುವಟಿಕೆ ಬಗ್ಗೆ ಸಾವಿಸ್ತಾರವಾಗಿ ವಿವರಿಸಿದರು. ಒಕ್ಕೂಟದ ನೂತನ ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಪದಾಧಿಕಾರಿಗಳ ಪದಗ್ರಹಣ ನಡೆಯಿತು.

ಕೃಷಿ ಸಖಿ ವಸಂತಿ ಒಕ್ಕೂಟದ ವರದಿ ಮಂಡನೆ ಮಾಡಿದರು. ಎಮ್.ಬಿಕೆ ಶಾರದಾ ಕಾರ್ಯಕ್ರಮ ನಿರೂಪಿಸಿದರು. ಎಲ್.ಸಿ.ಆರ್ ಪಿ ಶಶಿ ಭಾಗೀರಥಿ, ಕೃಷಿ ಸಖಿ, ಪಶು ಸಖಿ, ಬ್ಯಾಂಕ್ ಸಖಿ ಭಾಗವಹಿಸಿದ್ದರು. ಸಂಜೀವಿನಿ ಸದಸ್ಯರು. ಸ್ತ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಶಾರದಾ ಧನ್ಯವಾದವಿತ್ತರು.

Related posts

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya

ನಾಳ: ಗೋವಿಂದೂರು ಬಳಿ ವಿಎಂ ನರ್ಸರಿ ಉದ್ಘಾಟನೆ

Suddi Udaya

ಪಣಕಜೆ ಸಬರಬೈಲು ಅಂಗನವಾಡಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ

Suddi Udaya
error: Content is protected !!