23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

ಮಂಗಳೂರು: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ರವರು ಅ.31ರಂದು ನಿಧನರಾಗಿದ್ದಾರೆ.

ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವತ್ತು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಆನಂದ ಆಳ್ವರವರು ಮೂಡಬಿದಿರೆ ಪರಿಸರದಲ್ಲಿ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು. ಪ್ರಗತಿಪರ ಕೃಷಿಕರಾಗಿದ್ದರು. 1979 ರಿಂದ 1989 ರವರೆಗೆ ತಮ್ಮ ವಿಶಾಲವಾದ ಭತ್ತದ ಗದ್ದೆಯಲ್ಲಿ ಕಂಬಳವನ್ನು ಪ್ರವೇಶ ಟಿಕೆಟ್‌ಗಳೊಂದಿಗೆ ಆಯೋಜಿಸಿದ್ದ ಕೀರ್ತಿ ಕೂಡ ಆನಂದ ಆಳ್ವರಿಗೆ ಸಲ್ಲುತ್ತಿದೆ.

ಮೃತರು ಡಾ. ಮೋಹನ್ ಆಳ್ವ ಸಹಿತ ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!