ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ಬೆಳ್ತಂಗಡಿ: ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ , ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ , ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ , ಸಂಶೋಧನಾ ಸಂಘ (ನಿ) ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇದರ ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ನ 4 ರಂದು ಶ್ರೀ ಗುರುದೇವ ಪ.ಪೂ ಕಾಲೇಜಿನಲ್ಲಿ ಜರುಗಲಿದೆ.

ಶಿಬಿರದ ಉದ್ಘಾಟನೆಯನ್ನು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ , ಮಾಜಿ ಶಾಸಕ ವಸಂತ ಬಂಗೇರ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಅಧ್ಯಕ್ಷ ಹರಿದಾಸ್ ಎಸ್ . ಎಂ , ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ, ಸಂಶೋಧನಾ ಸಂಘ (ನಿ) ಅಧ್ಯಕ್ಷ ಶಿವಕುಮಾರ್ ಎಸ್.ಎಂ , ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಕಾರ್ಯದರ್ಶಿ ಯಶವಂತ ಪಟವರ್ಧನ್ , ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜ್ ನ ಪ್ರಾಂಶುಪಾಲೆ ಡಾ. ಸವಿತಾ , ಶ್ರೀ ಗುರುದೇವ ಪ.ಪೂ ಕಾಲೇಜ್ ನ ಪ್ರಾಂಶುಪಾಲ ಸುಕೇಶ್ , ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜ್ ನ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಬಿ.ಎ ಶಮಿಯುಲ್ಲ ಭಾಗವಹಿಸಲಿದ್ದಾರೆ.

 ನವೆಂಬರ್ 4 ರಂದು ಬೆಳಗ್ಗೆ 9 ಘಂಟೆಯಿಂದ ಮಧ್ಯಾಹ್ನ 1 ಘಂಟೆ ತನಕ ಶ್ರೀ ಗುರುದೇವ ಪ.ಪೂ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಲಿದ್ದು, ಯುವಕ/ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ , ರಕ್ತದಾನ ಮಾಡಬೇಕು. ರಕ್ತದಾನದಿಂದ ಇನ್ನೊಂದು ಜೀವವನ್ನು ಉಳಿಸಿದ ಸಾರ್ಥಕತೆ ಇರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

Leave a Comment

error: Content is protected !!