25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

ಬೆಳ್ತಂಗಡಿ: ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ , ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ , ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ , ಸಂಶೋಧನಾ ಸಂಘ (ನಿ) ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇದರ ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ನ 4 ರಂದು ಶ್ರೀ ಗುರುದೇವ ಪ.ಪೂ ಕಾಲೇಜಿನಲ್ಲಿ ಜರುಗಲಿದೆ.

ಶಿಬಿರದ ಉದ್ಘಾಟನೆಯನ್ನು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ , ಮಾಜಿ ಶಾಸಕ ವಸಂತ ಬಂಗೇರ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಅಧ್ಯಕ್ಷ ಹರಿದಾಸ್ ಎಸ್ . ಎಂ , ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ, ಸಂಶೋಧನಾ ಸಂಘ (ನಿ) ಅಧ್ಯಕ್ಷ ಶಿವಕುಮಾರ್ ಎಸ್.ಎಂ , ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಕಾರ್ಯದರ್ಶಿ ಯಶವಂತ ಪಟವರ್ಧನ್ , ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜ್ ನ ಪ್ರಾಂಶುಪಾಲೆ ಡಾ. ಸವಿತಾ , ಶ್ರೀ ಗುರುದೇವ ಪ.ಪೂ ಕಾಲೇಜ್ ನ ಪ್ರಾಂಶುಪಾಲ ಸುಕೇಶ್ , ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜ್ ನ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಬಿ.ಎ ಶಮಿಯುಲ್ಲ ಭಾಗವಹಿಸಲಿದ್ದಾರೆ.

 ನವೆಂಬರ್ 4 ರಂದು ಬೆಳಗ್ಗೆ 9 ಘಂಟೆಯಿಂದ ಮಧ್ಯಾಹ್ನ 1 ಘಂಟೆ ತನಕ ಶ್ರೀ ಗುರುದೇವ ಪ.ಪೂ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಲಿದ್ದು, ಯುವಕ/ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ , ರಕ್ತದಾನ ಮಾಡಬೇಕು. ರಕ್ತದಾನದಿಂದ ಇನ್ನೊಂದು ಜೀವವನ್ನು ಉಳಿಸಿದ ಸಾರ್ಥಕತೆ ಇರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬಾಲೆ ಪಿಲಿ ಸ್ಪರ್ಧೆ: ಬೆಳ್ತಂಗಡಿಯ ಶ್ರೇಷ್ಠ ಆಚಾರ್ಯ ಪ್ರಥಮ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya
error: Content is protected !!